ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ ಸಂಪೂರ್ಣ ದುರ್ಲಕ್ಷ್ಯ, ಮತಾಂಧರ ಓಲೈಕೆ ಮಾಡುವ ಪ್ರಯತ್ನವು ಕಾಣುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.
ಘಟನೆಯ ಆರೋಪಿಗಳನ್ನು ಬಂಧಿಸುವುದಕ್ಕೆ ಮಾತ್ರ ಸೀಮಿತ ಮಾಡದೆ ಕೂಡಲೇ ಸರಕಾರವು ಈ ಘಟನೆಯನ್ನು ಎಸ್ಐಟಿ ತನಿಖೆಗೆ ಒಳಪಡಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ ಮತಾಂಧರ ಮನೆಗಳನ್ನು ಮುಟ್ಟುಗೋಲು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸುತ್ತದೆ ಎಂದು ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…