ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ ಸಂಪೂರ್ಣ ದುರ್ಲಕ್ಷ್ಯ, ಮತಾಂಧರ ಓಲೈಕೆ ಮಾಡುವ ಪ್ರಯತ್ನವು ಕಾಣುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.
ಘಟನೆಯ ಆರೋಪಿಗಳನ್ನು ಬಂಧಿಸುವುದಕ್ಕೆ ಮಾತ್ರ ಸೀಮಿತ ಮಾಡದೆ ಕೂಡಲೇ ಸರಕಾರವು ಈ ಘಟನೆಯನ್ನು ಎಸ್ಐಟಿ ತನಿಖೆಗೆ ಒಳಪಡಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ ಮತಾಂಧರ ಮನೆಗಳನ್ನು ಮುಟ್ಟುಗೋಲು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸುತ್ತದೆ ಎಂದು ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…