ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಅಧಿವೇಶನ | ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರವನ್ನಾಗಿ ಘೋಷಿಸಬೇಕಿದೆ |

November 20, 2022
12:42 PM

ಸೆಕ್ಯಲರಿಸಂನ ಹೆಸರಿನಲ್ಲಿ ಹಿಂದೂ ಧರ್ಮದ ಮೇಲಾಗುವ ಆಕ್ರಮಣಗಳು, ಹಿಂದೂಗಳ ಹತ್ಯೆಯನ್ನು ತಟೆಗಟ್ಟಲು ಇರುವ ಏಕೈಕ ಮಾರ್ಗವೆಂದರೆ ಹಿಂದೂಸ್ತಾನವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರವೆಂದು ಘೋಷಿಸುವುದಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ಸಮನ್ವಯಕರಾದ  ಚಂದ್ರ ಮೊಗೇರ ಹೇಳಿದರು.

ಅವರು ಪುತ್ತೂರಿನ ಸ್ವಾಮಿ‌ ಕಲಾ ಮಂದಿರದಲ್ಲಿ  ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಲಾಗಿದ್ದ ಹಿಂದೂ ರಾಷ್ಟ್ರ ಜಾಗೃತಿ ಅಧಿವೇಶನದಲ್ಲಿ ಮಾತನಾಡುತ್ತಿದ್ದರು. ಈ ಅಧಿವೇಶದವು ಹಿಂದುತ್ವವಾದಿಗಳು, ಹಿಂದುತ್ವನಿಷ್ಠ ವಕೀಲರು, ಸಾಮಾಜಿಕ ಹೋರಾಟಗಾರರು, ಇತ್ಯಾದಿ ಹಿಂದುತ್ವಕ್ಕಾಗಿ ಕಾರ್ಯ ಮಾಡುವ ಸಂಘಟನೆಗಳು ಒಂದಾಗಿ ಹಿಂದೂ ರಾಷ್ಟ್ರದ ದಿಶೆಯನ್ನು ನಿರ್ಧರಿಸುವ ಉದ್ದೇಶವನ್ನು ಹೊಂದಿದೆ ಎಂದರು.

ಅಂಬಿಕಾ ಸಮೂಹ ವಿದ್ಯಾ ಸಂಸ್ಥೆ ಪುತ್ತೂರಿನ ಸಂಚಾಲಕರಾದ  ಸುಬ್ರಹ್ಮಣ್ಯ ನಟ್ಟೋಜ, ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಧರ್ಮಪ್ರಸಾರಕರಾದ  ಶ್ರೀಕೃಷ್ಣ ಉಪಾಧ್ಯಾಯ,  ಸಾಮಾಜಿಕ ಹೋರಾಟಗಾರರಾದ  ದಿನೇಶ್ ಜೈನ್  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ವಿದ್ಯಾ ಸಂಸ್ಥೆ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಇಂದು ಜಾತ್ಯಾತೀತ ರಾಷ್ಟ್ರದ ಕಲ್ಪನೆಯಲ್ಲಿ ಹಿಂದೂ ಧರ್ಮದ ಮೇಲೆ ಆಘಾತಗಳಾಗುತ್ತಿವೆ. ಈ ನಿಟ್ಟಿನಲ್ಲಿ ಧರ್ಮದ ರಕ್ಷಣೆಗಾಗಿ ಹಿಂದೂಗಳು ಸಮಿಧೆಯಂತೆ ಸಮರ್ಪಣೆಯಾಗಬೇಕಾಗಿದೆ ಎಂದರು.

ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಧರ್ಮಪ್ರಸಾರಕರಾದ  ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿ, ಧರ್ಮರಕ್ಷಣೆಗಾಗಿ ಪ್ರತಿಯೊಬ್ಬ ಹಿಂದೂಗಳು ಕನಿಷ್ಠ 1 ಗಂಟೆಯನ್ನಾದರು ನೀಡಿದರೆ ಶೀಘ್ರವೇ ಭಾರತವು ಹಿಂದೂ ರಾಷ್ಟ್ರವಾಗಬಹುದು ಎಂದರು.

ಭಾರತೀಯ ಗೋ ಪರಿವಾರ ಪ್ರಧಾನ ಕಾರ್ಯದರ್ಶಿ ಜಯಾನಂದ ಮಾತನಾಡಿ,33 ಕೋಟಿ ದೇವತೆಗಳು ವಾಸಿಸುವ ಗೋವಿನ ಪೋಷಣೆಯ ಜೊತೆಗೆ ಗೋ ಉತ್ಪನ್ನಗಳ ಬಳಕೆಗೆ ಉತ್ತೇಜಿಸಬೇಕಾಗಿದೆ. ಈ ಮೂಲಕ ದೇಶಿ ಗೋವಿನ ಸಂರಕ್ಷಣೆ ಮಾಡಬೇಕಾಗಿದೆ ಎಂದರು.

ಸಾಮಾಜಿಕ ಹೋರಾಟಗಾರರಾದ  ದಿನೇಶ್ ಜೈನ್ ಮಾತನಾಡಿ ಹಿಂದೂ ಧರ್ಮವನ್ನು ಉಳಿಸುವ ಜೊತೆಗೆ ಅದನ್ನು ಬೆಳೆಸುವುದು ಮತ್ತು ಕೃತಿಯಲ್ಲಿ ತರುವುದು ಅಗತ್ಯವಾಗಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ಧರ್ಮದ ಬೀಜವನ್ನು ಬಿತ್ತಬೇಕು ಎಂದು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror