Advertisement
ಸುದ್ದಿಗಳು

ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಅಧಿವೇಶನ | ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರವನ್ನಾಗಿ ಘೋಷಿಸಬೇಕಿದೆ |

Share

ಸೆಕ್ಯಲರಿಸಂನ ಹೆಸರಿನಲ್ಲಿ ಹಿಂದೂ ಧರ್ಮದ ಮೇಲಾಗುವ ಆಕ್ರಮಣಗಳು, ಹಿಂದೂಗಳ ಹತ್ಯೆಯನ್ನು ತಟೆಗಟ್ಟಲು ಇರುವ ಏಕೈಕ ಮಾರ್ಗವೆಂದರೆ ಹಿಂದೂಸ್ತಾನವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರವೆಂದು ಘೋಷಿಸುವುದಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ಸಮನ್ವಯಕರಾದ  ಚಂದ್ರ ಮೊಗೇರ ಹೇಳಿದರು.

ಅವರು ಪುತ್ತೂರಿನ ಸ್ವಾಮಿ‌ ಕಲಾ ಮಂದಿರದಲ್ಲಿ  ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಲಾಗಿದ್ದ ಹಿಂದೂ ರಾಷ್ಟ್ರ ಜಾಗೃತಿ ಅಧಿವೇಶನದಲ್ಲಿ ಮಾತನಾಡುತ್ತಿದ್ದರು. ಈ ಅಧಿವೇಶದವು ಹಿಂದುತ್ವವಾದಿಗಳು, ಹಿಂದುತ್ವನಿಷ್ಠ ವಕೀಲರು, ಸಾಮಾಜಿಕ ಹೋರಾಟಗಾರರು, ಇತ್ಯಾದಿ ಹಿಂದುತ್ವಕ್ಕಾಗಿ ಕಾರ್ಯ ಮಾಡುವ ಸಂಘಟನೆಗಳು ಒಂದಾಗಿ ಹಿಂದೂ ರಾಷ್ಟ್ರದ ದಿಶೆಯನ್ನು ನಿರ್ಧರಿಸುವ ಉದ್ದೇಶವನ್ನು ಹೊಂದಿದೆ ಎಂದರು.

ಅಂಬಿಕಾ ಸಮೂಹ ವಿದ್ಯಾ ಸಂಸ್ಥೆ ಪುತ್ತೂರಿನ ಸಂಚಾಲಕರಾದ  ಸುಬ್ರಹ್ಮಣ್ಯ ನಟ್ಟೋಜ, ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಧರ್ಮಪ್ರಸಾರಕರಾದ  ಶ್ರೀಕೃಷ್ಣ ಉಪಾಧ್ಯಾಯ,  ಸಾಮಾಜಿಕ ಹೋರಾಟಗಾರರಾದ  ದಿನೇಶ್ ಜೈನ್  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ವಿದ್ಯಾ ಸಂಸ್ಥೆ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಇಂದು ಜಾತ್ಯಾತೀತ ರಾಷ್ಟ್ರದ ಕಲ್ಪನೆಯಲ್ಲಿ ಹಿಂದೂ ಧರ್ಮದ ಮೇಲೆ ಆಘಾತಗಳಾಗುತ್ತಿವೆ. ಈ ನಿಟ್ಟಿನಲ್ಲಿ ಧರ್ಮದ ರಕ್ಷಣೆಗಾಗಿ ಹಿಂದೂಗಳು ಸಮಿಧೆಯಂತೆ ಸಮರ್ಪಣೆಯಾಗಬೇಕಾಗಿದೆ ಎಂದರು.

ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಧರ್ಮಪ್ರಸಾರಕರಾದ  ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿ, ಧರ್ಮರಕ್ಷಣೆಗಾಗಿ ಪ್ರತಿಯೊಬ್ಬ ಹಿಂದೂಗಳು ಕನಿಷ್ಠ 1 ಗಂಟೆಯನ್ನಾದರು ನೀಡಿದರೆ ಶೀಘ್ರವೇ ಭಾರತವು ಹಿಂದೂ ರಾಷ್ಟ್ರವಾಗಬಹುದು ಎಂದರು.

ಭಾರತೀಯ ಗೋ ಪರಿವಾರ ಪ್ರಧಾನ ಕಾರ್ಯದರ್ಶಿ ಜಯಾನಂದ ಮಾತನಾಡಿ,33 ಕೋಟಿ ದೇವತೆಗಳು ವಾಸಿಸುವ ಗೋವಿನ ಪೋಷಣೆಯ ಜೊತೆಗೆ ಗೋ ಉತ್ಪನ್ನಗಳ ಬಳಕೆಗೆ ಉತ್ತೇಜಿಸಬೇಕಾಗಿದೆ. ಈ ಮೂಲಕ ದೇಶಿ ಗೋವಿನ ಸಂರಕ್ಷಣೆ ಮಾಡಬೇಕಾಗಿದೆ ಎಂದರು.

ಸಾಮಾಜಿಕ ಹೋರಾಟಗಾರರಾದ  ದಿನೇಶ್ ಜೈನ್ ಮಾತನಾಡಿ ಹಿಂದೂ ಧರ್ಮವನ್ನು ಉಳಿಸುವ ಜೊತೆಗೆ ಅದನ್ನು ಬೆಳೆಸುವುದು ಮತ್ತು ಕೃತಿಯಲ್ಲಿ ತರುವುದು ಅಗತ್ಯವಾಗಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ಧರ್ಮದ ಬೀಜವನ್ನು ಬಿತ್ತಬೇಕು ಎಂದು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

39 minutes ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

10 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

10 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

11 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

18 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

22 hours ago