ಸುದ್ದಿಗಳು

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆ | ಸೂಕ್ತ ವ್ಯವಸ್ಥೆಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಪುತ್ತೂರು ನಗರಸಭೆಗೆ ಮನವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ವಿಸರ್ಜನೆ ಮಾಡುವುದರ ಉತ್ತಮ ವ್ಯವಸ್ಥೆ ಇಲ್ಲದ ಕಾರಣ, ಗಣೇಶನ ಅಪಮಾನವನ್ನು ಸಹ ನೋಡಬೇಕಾಗುತ್ತದೆ. ಈ ವ್ಯವಸ್ಥೆಯನ್ನು ಬದಲಿಸಿ ಶಾಸ್ತ್ರದಲ್ಲಿ ಹೇಳಿದಂತೆ ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಪುತ್ತೂರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

Advertisement

ಈ ಮನವಿಯಲ್ಲಿ ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ (ಮೊಬೈಲ) ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಮಧು ಎಸ್. ಮನೋಹರ್, ನಗರಸಭಾ ಆಯುಕ್ತರು ಪುತ್ತೂರು ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಧರ್ಮಪ್ರೆಮಿಗಳಾದ  ದಿನೇಶ್ ಜೈನ್,  ನಿತೀಶ್ ಕುಮಾರ್, ಹಿಂದೂ ಜನಜಾಗೃತಿ ಸಮತಿ ಸಮನ್ವಯಕರಾದ  ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ,  ದಯಾನಂದ,  ನಾಗೇಶ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

5 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

14 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

14 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

14 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

14 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago