Advertisement
ಸುದ್ದಿಗಳು

ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆ | ಸೂಕ್ತ ವ್ಯವಸ್ಥೆಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಪುತ್ತೂರು ನಗರಸಭೆಗೆ ಮನವಿ |

Share

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ವಿಸರ್ಜನೆ ಮಾಡುವುದರ ಉತ್ತಮ ವ್ಯವಸ್ಥೆ ಇಲ್ಲದ ಕಾರಣ, ಗಣೇಶನ ಅಪಮಾನವನ್ನು ಸಹ ನೋಡಬೇಕಾಗುತ್ತದೆ. ಈ ವ್ಯವಸ್ಥೆಯನ್ನು ಬದಲಿಸಿ ಶಾಸ್ತ್ರದಲ್ಲಿ ಹೇಳಿದಂತೆ ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಪುತ್ತೂರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಈ ಮನವಿಯಲ್ಲಿ ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ (ಮೊಬೈಲ) ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಮಧು ಎಸ್. ಮನೋಹರ್, ನಗರಸಭಾ ಆಯುಕ್ತರು ಪುತ್ತೂರು ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಧರ್ಮಪ್ರೆಮಿಗಳಾದ  ದಿನೇಶ್ ಜೈನ್,  ನಿತೀಶ್ ಕುಮಾರ್, ಹಿಂದೂ ಜನಜಾಗೃತಿ ಸಮತಿ ಸಮನ್ವಯಕರಾದ  ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ,  ದಯಾನಂದ,  ನಾಗೇಶ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 hour ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 hour ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 hour ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

17 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

17 hours ago