ಇಸ್ರೇಲ್ ಮೇಲೆ ‘ಹಮಾಸ್’ದಾಳಿ ಖಂಡನೆ | ಭಯೋತ್ಪಾದನೆ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಬೆನ್ನಿಗೆ ನಿಲ್ಲುವ ಅಗತ್ಯವಿದೆ – ಹಿಂದೂ ಜನಜಾಗೃತಿ ಸಮಿತಿ |

October 13, 2023
9:47 AM
ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

ಇತ್ತೀಚೆಗಷ್ಟೇ ಪ್ಯಾಲೆಸ್ತೀನ್‌ನ ಭಯೋತ್ಪಾದಕ ಸಂಘಟನೆ ‘ಹಮಾಸ್’ ನ ಭಯೋತ್ಪಾದಕರು ಇಸ್ರೇಲ್ ಮೇಲೆ ಸಾವಿರಾರು ರಾಕೆಟ್‌ಗಳಿಂದ ಭೂಮಿ ಮತ್ತು ಸಮುದ್ರದ ಮೂಲಕ ನುಗ್ಗಿ ದಾಳಿ ಮಾಡಿ ನೂರಾರು ಮುಗ್ಧ ಇಸ್ರೇಲಿ ನಾಗರಿಕರನ್ನು ಕೊಂದರು. ಈ ಭಯೋತ್ಪಾದಕ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

ರಮೇಶ್‌ ಶಿಂಧೆ

ಭಾರತದಲ್ಲಿಯೂ ಯಹೂದಿ ಸಹೋದರರು ಶಾಂತಿಯುತವಾಗಿ ಬದುಕುತ್ತಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಯಹೂದಿ ಸಹೋದರರ ಜೊತೆ ಇದೆ, ಎಂದೂ ರಮೇಶ ಶಿಂದೆ  ಹೇಳಿದ್ದಾರೆ.

ಇಂದು ಇಸ್ರೇಲ್‌ನಲ್ಲಿ ದಾಳಿ ನಡೆದಿದೆ, ಈ ಹಿಂದೆ ಕಾಶ್ಮೀರದಲ್ಲೂ ಇಂತಹ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದವು. ಇಂತಹ ದಾಳಿಗಳು ನಾಳೆ ಎಲ್ಲಿಯಾದರೂ ನಡೆಯಬಹುದು. ಜಿಹಾದಿ ಭಯೋತ್ಪಾದನೆಯು ಅಂತಾರಾಷ್ಟ್ರೀಯ ಸಮಸ್ಯೆಯಾಗಿದೆ. ಇದನ್ನು ವಿಶ್ವ ಮಟ್ಟದಲ್ಲಿ ವಿರೋಧಿಸಬೇಕು. ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ತಕ್ಷಣವೇ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿ ಅದರ ಬೆಂಬಲ ಅಂದರೆ ಜಿಹಾದಿ ಭಯೋತ್ಪಾದನೆಯ ವಿರುದ್ಧ ನಿಲುವು ತೆಗೆದುಕೊಂಡರು. ಭಾರತ ಸರಕಾರದ ಈ ನಿಲುವನ್ನು ಹಿಂದೂ ಜನಜಾಗೃತಿ ಸಮಿತಿಯೂ ಬೆಂಬಲಿಸುತ್ತದೆ.

ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ವಿರುದ್ಧ ಮೆರವಣಿಗೆ ನಡೆಸಿದರು, ಇದು ತುಂಬಾ ಗಂಭೀರವಾಗಿದೆ. ಇದರಿಂದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಯೋತ್ಪಾದಕ ಸಂಘಟನೆ ‘ಹಮಾಸ್’ಗೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದಾರೆ. ಈ ಘಟನೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.ಯ) ಮೂಲಕ ತನಿಖೆ ನಡೆಸಬೇಕೆಂದೂ ನಾವು ಒತ್ತಾಯಿಸುತ್ತೇವೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ
March 14, 2025
6:57 AM
by: The Rural Mirror ಸುದ್ದಿಜಾಲ
ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ
March 14, 2025
6:54 AM
by: The Rural Mirror ಸುದ್ದಿಜಾಲ
ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |
March 14, 2025
6:51 AM
by: The Rural Mirror ಸುದ್ದಿಜಾಲ
ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?
March 14, 2025
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror