ಇತ್ತೀಚೆಗಷ್ಟೇ ಪ್ಯಾಲೆಸ್ತೀನ್ನ ಭಯೋತ್ಪಾದಕ ಸಂಘಟನೆ ‘ಹಮಾಸ್’ ನ ಭಯೋತ್ಪಾದಕರು ಇಸ್ರೇಲ್ ಮೇಲೆ ಸಾವಿರಾರು ರಾಕೆಟ್ಗಳಿಂದ ಭೂಮಿ ಮತ್ತು ಸಮುದ್ರದ ಮೂಲಕ ನುಗ್ಗಿ ದಾಳಿ ಮಾಡಿ ನೂರಾರು ಮುಗ್ಧ ಇಸ್ರೇಲಿ ನಾಗರಿಕರನ್ನು ಕೊಂದರು. ಈ ಭಯೋತ್ಪಾದಕ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.
ಭಾರತದಲ್ಲಿಯೂ ಯಹೂದಿ ಸಹೋದರರು ಶಾಂತಿಯುತವಾಗಿ ಬದುಕುತ್ತಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಯಹೂದಿ ಸಹೋದರರ ಜೊತೆ ಇದೆ, ಎಂದೂ ರಮೇಶ ಶಿಂದೆ ಹೇಳಿದ್ದಾರೆ.
ಇಂದು ಇಸ್ರೇಲ್ನಲ್ಲಿ ದಾಳಿ ನಡೆದಿದೆ, ಈ ಹಿಂದೆ ಕಾಶ್ಮೀರದಲ್ಲೂ ಇಂತಹ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದವು. ಇಂತಹ ದಾಳಿಗಳು ನಾಳೆ ಎಲ್ಲಿಯಾದರೂ ನಡೆಯಬಹುದು. ಜಿಹಾದಿ ಭಯೋತ್ಪಾದನೆಯು ಅಂತಾರಾಷ್ಟ್ರೀಯ ಸಮಸ್ಯೆಯಾಗಿದೆ. ಇದನ್ನು ವಿಶ್ವ ಮಟ್ಟದಲ್ಲಿ ವಿರೋಧಿಸಬೇಕು. ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ತಕ್ಷಣವೇ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿ ಅದರ ಬೆಂಬಲ ಅಂದರೆ ಜಿಹಾದಿ ಭಯೋತ್ಪಾದನೆಯ ವಿರುದ್ಧ ನಿಲುವು ತೆಗೆದುಕೊಂಡರು. ಭಾರತ ಸರಕಾರದ ಈ ನಿಲುವನ್ನು ಹಿಂದೂ ಜನಜಾಗೃತಿ ಸಮಿತಿಯೂ ಬೆಂಬಲಿಸುತ್ತದೆ.
ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ವಿರುದ್ಧ ಮೆರವಣಿಗೆ ನಡೆಸಿದರು, ಇದು ತುಂಬಾ ಗಂಭೀರವಾಗಿದೆ. ಇದರಿಂದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಯೋತ್ಪಾದಕ ಸಂಘಟನೆ ‘ಹಮಾಸ್’ಗೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದಾರೆ. ಈ ಘಟನೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.ಯ) ಮೂಲಕ ತನಿಖೆ ನಡೆಸಬೇಕೆಂದೂ ನಾವು ಒತ್ತಾಯಿಸುತ್ತೇವೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…