ಪಿ ಎಫ್‌ ಐ ನಿಷೇಧ | ಹಿಂದೂ ಜನಜಾಗೃತಿ ಸಮಿತಿ ಸ್ವಾಗತ

September 28, 2022
7:30 PM

‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಅಂದರೆ ‘ಪಿ.ಎಫ್.ಐ.’  ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯ  ಅಡಿಯಲ್ಲಿ ನಿಷೇಧಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್‌ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.

‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್‌ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror