ಸುದ್ದಿಗಳು

ಪಿ ಎಫ್‌ ಐ ನಿಷೇಧ | ಹಿಂದೂ ಜನಜಾಗೃತಿ ಸಮಿತಿ ಸ್ವಾಗತ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಅಂದರೆ ‘ಪಿ.ಎಫ್.ಐ.’  ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯ  ಅಡಿಯಲ್ಲಿ ನಿಷೇಧಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

Advertisement
Advertisement

‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್‌ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.

‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್‌ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

6 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

10 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

18 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

18 hours ago