‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.
‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…