‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.
‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…