‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.
‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…