Advertisement
ಸುದ್ದಿಗಳು

ಪಿ ಎಫ್‌ ಐ ನಿಷೇಧ | ಹಿಂದೂ ಜನಜಾಗೃತಿ ಸಮಿತಿ ಸ್ವಾಗತ

Share

‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಅಂದರೆ ‘ಪಿ.ಎಫ್.ಐ.’  ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯ  ಅಡಿಯಲ್ಲಿ ನಿಷೇಧಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್‌ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.

‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್‌ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

14 minutes ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

2 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

10 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

16 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago