ರಾಜ್ಯದಲ್ಲಿ ಮದರಸಾ ನಿಷೇಧಿಸುವಂತೆ ಮನವಿ | ವಿವಿಧ ಹಿಂದೂಪರ ಸಂಘಟನೆಗಳಿಂದ ಶಿಕ್ಷಣ ಇಲಾಖೆಗೆ ಮನವಿ |

September 25, 2022
1:19 PM

ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು  ಅರ್ಜಿದಾರರ ಬೇಡಿಕೆ.  ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror