ಸುದ್ದಿಗಳು

ರಾಜ್ಯದಲ್ಲಿ ಮದರಸಾ ನಿಷೇಧಿಸುವಂತೆ ಮನವಿ | ವಿವಿಧ ಹಿಂದೂಪರ ಸಂಘಟನೆಗಳಿಂದ ಶಿಕ್ಷಣ ಇಲಾಖೆಗೆ ಮನವಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು  ಅರ್ಜಿದಾರರ ಬೇಡಿಕೆ.  ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

Advertisement

ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

3 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

4 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

13 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

14 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

14 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

14 hours ago