ಸುದ್ದಿಗಳು

ರಾಜ್ಯದಲ್ಲಿ ಮದರಸಾ ನಿಷೇಧಿಸುವಂತೆ ಮನವಿ | ವಿವಿಧ ಹಿಂದೂಪರ ಸಂಘಟನೆಗಳಿಂದ ಶಿಕ್ಷಣ ಇಲಾಖೆಗೆ ಮನವಿ |

Share

ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು  ಅರ್ಜಿದಾರರ ಬೇಡಿಕೆ.  ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.

ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

2 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

3 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

3 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

3 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

3 hours ago

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ…

3 hours ago