(ಸಾಂದರ್ಭಿಕ ಚಿತ್ರ )
ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು ಅರ್ಜಿದಾರರ ಬೇಡಿಕೆ. ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.
ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…