(ಸಾಂದರ್ಭಿಕ ಚಿತ್ರ )
ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು ಅರ್ಜಿದಾರರ ಬೇಡಿಕೆ. ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.
ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…