ಅನ್ಯಧರ್ಮೀಯರಿಗೆ ವ್ಯಾಪಾರ ವಹಿವಾಟು ನಿಷೇಧ | ಅಂಜನಾದ್ರಿ ಬೆಟ್ಟದಲ್ಲೂ ಬ್ಯಾನರ್‌ | ಈಗ ನಕಲಿ ಐಡಿ ಮೂಲಕ ವ್ಯಾಪಾರಕ್ಕೆ ಯತ್ನ |

November 30, 2022
9:06 AM

ಹಿಂದೂ ಕ್ಷೇತ್ರದಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರಿಗೆ ವ್ಯಾಪಾರ-ವ್ಯವಹಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿವೆ. ಈಚೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ, ಕೊಡಗಿನ ದೇವಸ್ಥಾನಗಳಲ್ಲಿ ನಿಷೇಧ ಬ್ಯಾನರ್‌ ಕಂಡುಬಂದಿರುವ ಜೊತೆಗೇ ಅಂಜನಾದ್ರಿ ಬೆಟ್ಟದಲ್ಲೂ ಬ್ಯಾನರ್‌ ಅಳವಡಿಕೆಯಾಗಿದೆ. ಜಿಲ್ಲಾಡಳಿತವು ಈ ಬ್ಯಾನರ್‌ ತೆರವು ಮಾಡಿದೆ. ಈ ನಡುವೆಯೇ ನಕಲಿ ಐಡಿ ಮೂಲಕ ವ್ಯಾಪಾರ ವಹಿವಾಟು ನಡೆಸುವುದು  ಬೆಳಕಿಗೆ ಬಂದಿದೆ. 

Advertisement
Advertisement

ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಗಳಿಂದ, ಹಿಂದೂಗಳಿಗಾಗಿ, ಹಿಂದೂಗಳಿಗೋಸ್ಕರ ಅನ್ನುವ ಪೋಸ್ಟರ್ ಅಳವಡಿಸಲಾಗಿತ್ತು. ಈ ಪೋಸ್ಟರ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್‌ಗೂ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿತ್ತು. ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಎಚ್ವೆತ್ತುಕೊಂಡ ಕೊಪ್ಪಳ‌ ಜಿಲ್ಲಾಡಳಿತ, ಅನ್ಯಧರ್ಮೀಯರಿಗೆ ವ್ಯಾಪಾರ ವಹಿವಾಟು ಅವಕಾಶವಿಲ್ಲ ಎಂದು ಹಾಕಿದ್ದ ಬ್ಯಾನರ್‌ ತೆರವುಗೊಳಿಸಿದೆ.

ಚಂಪಾಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರ ವಹಿವಾಟು ನಿಷೇಧಿಸಿದ್ದರೂ, ಯುವಕನೊಬ್ಬ ಹಿಂದೂ ಹೆಸರಿನ ಐಡಿ  ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಸಿಕ್ಕಿಬಿದ್ದ ಘಟನೆ ಕೊಡಗು ಜಿಲ್ಲೆಯ ‌ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ದೇವಾಲಯದಲ್ಲಿ ನಡೆದಿದೆ. ಇಲ್ಲಿ  ಹಿಂದೂಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಒಂದು ವಾರದ ಹಿಂದೆಯೇ ಘೋಷಿಸಲಾಗಿತ್ತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror