Advertisement
ಸುದ್ದಿಗಳು

ಅನ್ಯಧರ್ಮೀಯರಿಗೆ ವ್ಯಾಪಾರ ವಹಿವಾಟು ನಿಷೇಧ | ಅಂಜನಾದ್ರಿ ಬೆಟ್ಟದಲ್ಲೂ ಬ್ಯಾನರ್‌ | ಈಗ ನಕಲಿ ಐಡಿ ಮೂಲಕ ವ್ಯಾಪಾರಕ್ಕೆ ಯತ್ನ |

Share

ಹಿಂದೂ ಕ್ಷೇತ್ರದಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರಿಗೆ ವ್ಯಾಪಾರ-ವ್ಯವಹಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿವೆ. ಈಚೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ, ಕೊಡಗಿನ ದೇವಸ್ಥಾನಗಳಲ್ಲಿ ನಿಷೇಧ ಬ್ಯಾನರ್‌ ಕಂಡುಬಂದಿರುವ ಜೊತೆಗೇ ಅಂಜನಾದ್ರಿ ಬೆಟ್ಟದಲ್ಲೂ ಬ್ಯಾನರ್‌ ಅಳವಡಿಕೆಯಾಗಿದೆ. ಜಿಲ್ಲಾಡಳಿತವು ಈ ಬ್ಯಾನರ್‌ ತೆರವು ಮಾಡಿದೆ. ಈ ನಡುವೆಯೇ ನಕಲಿ ಐಡಿ ಮೂಲಕ ವ್ಯಾಪಾರ ವಹಿವಾಟು ನಡೆಸುವುದು  ಬೆಳಕಿಗೆ ಬಂದಿದೆ. 

ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಗಳಿಂದ, ಹಿಂದೂಗಳಿಗಾಗಿ, ಹಿಂದೂಗಳಿಗೋಸ್ಕರ ಅನ್ನುವ ಪೋಸ್ಟರ್ ಅಳವಡಿಸಲಾಗಿತ್ತು. ಈ ಪೋಸ್ಟರ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್‌ಗೂ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿತ್ತು. ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಎಚ್ವೆತ್ತುಕೊಂಡ ಕೊಪ್ಪಳ‌ ಜಿಲ್ಲಾಡಳಿತ, ಅನ್ಯಧರ್ಮೀಯರಿಗೆ ವ್ಯಾಪಾರ ವಹಿವಾಟು ಅವಕಾಶವಿಲ್ಲ ಎಂದು ಹಾಕಿದ್ದ ಬ್ಯಾನರ್‌ ತೆರವುಗೊಳಿಸಿದೆ.

ಚಂಪಾಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರ ವಹಿವಾಟು ನಿಷೇಧಿಸಿದ್ದರೂ, ಯುವಕನೊಬ್ಬ ಹಿಂದೂ ಹೆಸರಿನ ಐಡಿ  ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಸಿಕ್ಕಿಬಿದ್ದ ಘಟನೆ ಕೊಡಗು ಜಿಲ್ಲೆಯ ‌ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ದೇವಾಲಯದಲ್ಲಿ ನಡೆದಿದೆ. ಇಲ್ಲಿ  ಹಿಂದೂಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಒಂದು ವಾರದ ಹಿಂದೆಯೇ ಘೋಷಿಸಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

5 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

15 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

21 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago