Advertisement
ಸುದ್ದಿಗಳು

ಅನ್ಯಧರ್ಮೀಯರಿಗೆ ವ್ಯಾಪಾರ ವಹಿವಾಟು ನಿಷೇಧ | ಅಂಜನಾದ್ರಿ ಬೆಟ್ಟದಲ್ಲೂ ಬ್ಯಾನರ್‌ | ಈಗ ನಕಲಿ ಐಡಿ ಮೂಲಕ ವ್ಯಾಪಾರಕ್ಕೆ ಯತ್ನ |

Share

ಹಿಂದೂ ಕ್ಷೇತ್ರದಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರಿಗೆ ವ್ಯಾಪಾರ-ವ್ಯವಹಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿವೆ. ಈಚೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ, ಕೊಡಗಿನ ದೇವಸ್ಥಾನಗಳಲ್ಲಿ ನಿಷೇಧ ಬ್ಯಾನರ್‌ ಕಂಡುಬಂದಿರುವ ಜೊತೆಗೇ ಅಂಜನಾದ್ರಿ ಬೆಟ್ಟದಲ್ಲೂ ಬ್ಯಾನರ್‌ ಅಳವಡಿಕೆಯಾಗಿದೆ. ಜಿಲ್ಲಾಡಳಿತವು ಈ ಬ್ಯಾನರ್‌ ತೆರವು ಮಾಡಿದೆ. ಈ ನಡುವೆಯೇ ನಕಲಿ ಐಡಿ ಮೂಲಕ ವ್ಯಾಪಾರ ವಹಿವಾಟು ನಡೆಸುವುದು  ಬೆಳಕಿಗೆ ಬಂದಿದೆ. 

Advertisement

ಅಂಜನಾದ್ರಿ ಬೆಟ್ಟದಲ್ಲಿ ಹಿಂದೂಗಳಿಂದ, ಹಿಂದೂಗಳಿಗಾಗಿ, ಹಿಂದೂಗಳಿಗೋಸ್ಕರ ಅನ್ನುವ ಪೋಸ್ಟರ್ ಅಳವಡಿಸಲಾಗಿತ್ತು. ಈ ಪೋಸ್ಟರ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ, ತಹಶೀಲ್ದಾರ್‌ಗೂ ಹಿಂದೂ ಜಾಗರಣ ವೇದಿಕೆ ಮನವಿ ಮಾಡಿತ್ತು. ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಎಚ್ವೆತ್ತುಕೊಂಡ ಕೊಪ್ಪಳ‌ ಜಿಲ್ಲಾಡಳಿತ, ಅನ್ಯಧರ್ಮೀಯರಿಗೆ ವ್ಯಾಪಾರ ವಹಿವಾಟು ಅವಕಾಶವಿಲ್ಲ ಎಂದು ಹಾಕಿದ್ದ ಬ್ಯಾನರ್‌ ತೆರವುಗೊಳಿಸಿದೆ.

ಚಂಪಾಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರ ವ್ಯಾಪಾರ ವಹಿವಾಟು ನಿಷೇಧಿಸಿದ್ದರೂ, ಯುವಕನೊಬ್ಬ ಹಿಂದೂ ಹೆಸರಿನ ಐಡಿ  ಬಳಸಿ ವ್ಯಾಪಾರ ನಡೆಸಲು ಬಂದು ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಸಿಕ್ಕಿಬಿದ್ದ ಘಟನೆ ಕೊಡಗು ಜಿಲ್ಲೆಯ ‌ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ದೇವಾಲಯದಲ್ಲಿ ನಡೆದಿದೆ. ಇಲ್ಲಿ  ಹಿಂದೂಯೇತರರು ವ್ಯಾಪಾರ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಒಂದು ವಾರದ ಹಿಂದೆಯೇ ಘೋಷಿಸಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

14 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago