ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಪುತ್ತೂರಿನ ಶಾರದಾ ಭಜನಾ ಮಂದಿರ ಶನಿವಾರದಂದು ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಮಾತನಾಡಿ ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ದಾರೆ. ಕಾನೂನಿನ ಮುಖಾಂತರ ಹೋರಾಟ ಮಾಡಲು ಕೋರ್ಟಿನಲ್ಲಿ ಸುಮಾರು 3 ಕೋಟಿಯಷ್ಟು ಕೇಸ್ ಗಳು (ಅರ್ಜಿಗಳು) ಇತ್ಯರ್ಥ ಆಗದೆ ಬಾಕಿ ಉಳಿದಿದೆ. ಇದರಿಂದ ನಮ್ಮ ಸಮಸ್ಯೆಗೆ ಪರಿಹಾರ ಸಿಗಲೂ ಸಾಧ್ಯವಿದೆಯೇ? ಈ ಎಲ್ಲಾ ಸಮಸ್ಯೆಗಳಿಗೆ ಪ್ರತಿಯೊಬ್ಬ ಹಿಂದೂಗಳಲ್ಲಿ ಹಿಂದೂರಾಷ್ಟ್ರ ಸ್ಥಾಪನೆಯ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಇದಕ್ಕಾಗಿ ಧರ್ಮಾದಿಷ್ಠಿತ ಹಿಂದೂರಾಷ್ಟ್ರ ಸ್ಥಾಪನೆಯೊಂದೇ ಗುರಿ ಎಂದು ಹೇಳಿದರು.
ಹಿಂದೂ ಜನಜಾಗೃತಿ ಸಮಿತಿಯ ಗುರುಪ್ರಸಾದ್ ಗೌಡ ಮಾತನಾಡಿ, ಹೇಗೆ ಸೂರ್ಯೋದಯ ಆಗುವಾಗ ಕತ್ತಲೆ ತನ್ನಷ್ಟಕ್ಕೆ ದೂರವಾಗುತ್ತದೆಯೋ ಅದೇ ರೀತಿ ಹಿಂದೂರಾಷ್ಟ್ರ ಸ್ಥಾಪನೆಯಾದರೆ ತನ್ನಷ್ಟಕ್ಕೇ ಭ್ರಷ್ಟಾಚಾರ, ಲವ್ ಜಿಹಾದ್, ಮತಾಂತರ, ಗೋಹತ್ಯೆ ಇದು ನಿಲ್ಲಲಿಕ್ಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ “ಹಿಂದೂ ರಾಷ್ಟ್ರ” ಸ್ಥಾಪನೆಯ ಪ್ರತಿಜ್ಞೆಯನ್ನು ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ ಮತ್ತು ಧರ್ಮಪ್ರೆಮಿಗಳಾದ ದಿನೇಶ್ ಜೈನ್, ನವೀನ್ ಕುಲಾಲ್, ಹರಿಪ್ರಸಾದ್ ಶೆಟ್ಟಿ, ಕರುಣಾಕರ ಪುಣಚ, ಅಶೋಕ ಶಾಂತಡ್ಕ ಮತ್ತಿತರರು ಉಪಸ್ತಿತರಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…