ಸುದ್ದಿಗಳು

#Hindu |ಹಿಂದೂಗಳ ಸಮಸ್ಯೆಗಳಿಗೆ ಒಂದೇ ಪರಿಹಾರ “ಹಿಂದೂರಾಷ್ಟ್ರ” | ಸನಾತನ ಸಂಸ್ಥೆ ಅಭಿಮತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಪುತ್ತೂರಿನ ಶಾರದಾ ಭಜನಾ ಮಂದಿರ ಶನಿವಾರದಂದು ಪ್ರವಚನ ನಡೆಯಿತು.

Advertisement

ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಮಾತನಾಡಿ ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ದಾರೆ. ಕಾನೂನಿನ ಮುಖಾಂತರ ಹೋರಾಟ ಮಾಡಲು ಕೋರ್ಟಿನಲ್ಲಿ ಸುಮಾರು 3 ಕೋಟಿಯಷ್ಟು ಕೇಸ್ ಗಳು (ಅರ್ಜಿಗಳು) ಇತ್ಯರ್ಥ ಆಗದೆ ಬಾಕಿ ಉಳಿದಿದೆ. ಇದರಿಂದ ನಮ್ಮ ಸಮಸ್ಯೆಗೆ ಪರಿಹಾರ ಸಿಗಲೂ ಸಾಧ್ಯವಿದೆಯೇ? ಈ ಎಲ್ಲಾ ಸಮಸ್ಯೆಗಳಿಗೆ ಪ್ರತಿಯೊಬ್ಬ ಹಿಂದೂಗಳಲ್ಲಿ ಹಿಂದೂರಾಷ್ಟ್ರ ಸ್ಥಾಪನೆಯ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಇದಕ್ಕಾಗಿ ಧರ್ಮಾದಿಷ್ಠಿತ ಹಿಂದೂರಾಷ್ಟ್ರ ಸ್ಥಾಪನೆಯೊಂದೇ ಗುರಿ ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿಯ ಗುರುಪ್ರಸಾದ್ ಗೌಡ ಮಾತನಾಡಿ, ಹೇಗೆ ಸೂರ್ಯೋದಯ ಆಗುವಾಗ ಕತ್ತಲೆ ತನ್ನಷ್ಟಕ್ಕೆ ದೂರವಾಗುತ್ತದೆಯೋ ಅದೇ ರೀತಿ ಹಿಂದೂರಾಷ್ಟ್ರ ಸ್ಥಾಪನೆಯಾದರೆ ತನ್ನಷ್ಟಕ್ಕೇ ಭ್ರಷ್ಟಾಚಾರ, ಲವ್ ಜಿಹಾದ್, ಮತಾಂತರ, ಗೋಹತ್ಯೆ ಇದು ನಿಲ್ಲಲಿಕ್ಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ “ಹಿಂದೂ ರಾಷ್ಟ್ರ” ಸ್ಥಾಪನೆಯ ಪ್ರತಿಜ್ಞೆಯನ್ನು ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ ಮತ್ತು ಧರ್ಮಪ್ರೆಮಿಗಳಾದ  ದಿನೇಶ್ ಜೈನ್, ನವೀನ್ ಕುಲಾಲ್, ಹರಿಪ್ರಸಾದ್ ಶೆಟ್ಟಿ, ಕರುಣಾಕರ ಪುಣಚ, ಅಶೋಕ ಶಾಂತಡ್ಕ ಮತ್ತಿತರರು ಉಪಸ್ತಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

39 minutes ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 hour ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 hour ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

9 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

20 hours ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

20 hours ago