ಹಿಂದೂ ಜನಜಾಗೃತಿ ಸಮಿತಿಯ ದ್ವಿದಶಕ ವರ್ಧಂತ್ಯೋತ್ಸವದ ಪ್ರಯುಕ್ತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ. ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನದ ನಿಮಿತ್ತ ಪುತ್ತೂರಿನ ಶಾರದಾ ಭಜನಾ ಮಂದಿರ ಶನಿವಾರದಂದು ಪ್ರವಚನ ನಡೆಯಿತು.
ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರರಾದ ಚೇತನ್ ರಾಜಹಂಸ ಮಾತನಾಡಿ ಸಮಾಜದಲ್ಲಿ ಇಂದು ಭ್ರಷ್ಟಾಚಾರ, ಮತಾಂತರ, ಲವ್ ಜಿಹಾದ್,ಗೋಹತ್ಯೆ ಮುಂತಾದವುಗಳು ತಾಂಡವವಾಡುತ್ತಿದೆ. ಇದಕ್ಕೆ ಕಾನೂನಿನಲ್ಲಿ ತಡೆಹಿಡಿಯುವ ಅವಕಾಶವಿದ್ದರೂ ವ್ಯವಸ್ಥೆ ಸರಿಯಿಲ್ಲದ ಕಾರಣ ಇದರ ತೊಂದರೆಯನ್ನು ಪ್ರತಿಯೊಬ್ಬರು ಅನುಭವಿಸುತ್ತಿದ್ದಾರೆ. ಕಾನೂನಿನ ಮುಖಾಂತರ ಹೋರಾಟ ಮಾಡಲು ಕೋರ್ಟಿನಲ್ಲಿ ಸುಮಾರು 3 ಕೋಟಿಯಷ್ಟು ಕೇಸ್ ಗಳು (ಅರ್ಜಿಗಳು) ಇತ್ಯರ್ಥ ಆಗದೆ ಬಾಕಿ ಉಳಿದಿದೆ. ಇದರಿಂದ ನಮ್ಮ ಸಮಸ್ಯೆಗೆ ಪರಿಹಾರ ಸಿಗಲೂ ಸಾಧ್ಯವಿದೆಯೇ? ಈ ಎಲ್ಲಾ ಸಮಸ್ಯೆಗಳಿಗೆ ಪ್ರತಿಯೊಬ್ಬ ಹಿಂದೂಗಳಲ್ಲಿ ಹಿಂದೂರಾಷ್ಟ್ರ ಸ್ಥಾಪನೆಯ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ. ಇದಕ್ಕಾಗಿ ಧರ್ಮಾದಿಷ್ಠಿತ ಹಿಂದೂರಾಷ್ಟ್ರ ಸ್ಥಾಪನೆಯೊಂದೇ ಗುರಿ ಎಂದು ಹೇಳಿದರು.
ಹಿಂದೂ ಜನಜಾಗೃತಿ ಸಮಿತಿಯ ಗುರುಪ್ರಸಾದ್ ಗೌಡ ಮಾತನಾಡಿ, ಹೇಗೆ ಸೂರ್ಯೋದಯ ಆಗುವಾಗ ಕತ್ತಲೆ ತನ್ನಷ್ಟಕ್ಕೆ ದೂರವಾಗುತ್ತದೆಯೋ ಅದೇ ರೀತಿ ಹಿಂದೂರಾಷ್ಟ್ರ ಸ್ಥಾಪನೆಯಾದರೆ ತನ್ನಷ್ಟಕ್ಕೇ ಭ್ರಷ್ಟಾಚಾರ, ಲವ್ ಜಿಹಾದ್, ಮತಾಂತರ, ಗೋಹತ್ಯೆ ಇದು ನಿಲ್ಲಲಿಕ್ಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ “ಹಿಂದೂ ರಾಷ್ಟ್ರ” ಸ್ಥಾಪನೆಯ ಪ್ರತಿಜ್ಞೆಯನ್ನು ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಮನ್ವಯಕರಾದ ಚಂದ್ರ ಮೊಗೇರ ಮತ್ತು ಧರ್ಮಪ್ರೆಮಿಗಳಾದ ದಿನೇಶ್ ಜೈನ್, ನವೀನ್ ಕುಲಾಲ್, ಹರಿಪ್ರಸಾದ್ ಶೆಟ್ಟಿ, ಕರುಣಾಕರ ಪುಣಚ, ಅಶೋಕ ಶಾಂತಡ್ಕ ಮತ್ತಿತರರು ಉಪಸ್ತಿತರಿದ್ದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…