ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…