Advertisement
ಸುದ್ದಿಗಳು

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

Share

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಳಮನುರಿ ತಾಲ್ಲೂಕಿನ ವಾರಂಗಾ ಫಾಟಾ ಪ್ರದೇಶದಲ್ಲಿ ಆಹಾರ ಸುರಕ್ಷತಾ ಇಲಾಖೆಯು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಸುಮಾರು ₹2.34 ಕೋಟಿ ಮೌಲ್ಯದ ಅನುಮಾನಾಸ್ಪದ ಅಡಿಕೆಯನ್ನು ಜಪ್ತಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯ ವಿರುದ್ಧ ಅಖಾಡಾ ಬಾಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಜೂನ್ 8 ರ ಸಂಜೆ ನಾಗ್ಪುರ ರಸ್ತೆಯಲ್ಲಿರುವ ಹೋಟೆಲ್ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಪರಿಶೀಲಿಸಿದ ವೇಳೆ ದೊಡ್ಡ ಪ್ರಮಾಣದ ಅಡಿಕೆ ಸಂಗ್ರಹ ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ಅಡಿಕೆ ಮಾನವ ಸೇವನೆಗೆ ಸುರಕ್ಷಿತವಲ್ಲ ಎಂಬ ಅನುಮಾನ ವ್ಯಕ್ತವಾಗಿದ್ದು, ಆಹಾರ ಸುರಕ್ಷತಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಸೋಲಾಪುರ, ಅಹಮದ್‌ನಗರ ಮೂಲದ ಕೆಲ ವ್ಯಕ್ತಿಗಳ ಜೊತೆಗೆ ಶಿವಮೊಗ್ಗ ಮೂಲದ ಟ್ರೇಡರ್ಸ್‌ ಹಾಗೂ ಛತ್ತೀಸ್‌ಗಢ, ದೆಹಲಿಯ ಎರಡು ಟ್ರೇಡರ್ಸ್ ಸೇರಿದಂತೆ ಒಟ್ಟು ಎಂಟು ಮಂದಿ ಹಾಗೂ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಾಚರಣೆಯಲ್ಲಿ ಮೂರು ಲಾರಿಗಳಿಂದ ಒಟ್ಟು 1,265 ಚೀಲಗಳ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ತೂಕ 88,544 ಕೆ.ಜಿ. ಆಗಿದ್ದು, ಅಂದಾಜು ಮೌಲ್ಯ ₹2,34,64,160 ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಸೇರಿ ಮಾನವ ಸೇವನೆಗೆ ಅಸುರಕ್ಷಿತವಾಗಿರಬಹುದಾದ ಅಡಿಕೆಯನ್ನು ಸಾಗಾಟ, ಖರೀದಿ ಮತ್ತು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Food Safety Department officials in Maharashtra’s Hingoli district seized 88,544 kg of suspected unsafe arecanut worth ₹2.34 crore. Eight persons and firms, including traders from Shivamogga, have been booked, while three individuals have been taken into custody for further investigation.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

13 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

24 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago