ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಳಮನುರಿ ತಾಲ್ಲೂಕಿನ ವಾರಂಗಾ ಫಾಟಾ ಪ್ರದೇಶದಲ್ಲಿ ಆಹಾರ ಸುರಕ್ಷತಾ ಇಲಾಖೆಯು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಸುಮಾರು ₹2.34 ಕೋಟಿ ಮೌಲ್ಯದ ಅನುಮಾನಾಸ್ಪದ ಅಡಿಕೆಯನ್ನು ಜಪ್ತಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯ ವಿರುದ್ಧ ಅಖಾಡಾ ಬಾಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಜೂನ್ 8 ರ ಸಂಜೆ ನಾಗ್ಪುರ ರಸ್ತೆಯಲ್ಲಿರುವ ಹೋಟೆಲ್ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಪರಿಶೀಲಿಸಿದ ವೇಳೆ ದೊಡ್ಡ ಪ್ರಮಾಣದ ಅಡಿಕೆ ಸಂಗ್ರಹ ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ಅಡಿಕೆ ಮಾನವ ಸೇವನೆಗೆ ಸುರಕ್ಷಿತವಲ್ಲ ಎಂಬ ಅನುಮಾನ ವ್ಯಕ್ತವಾಗಿದ್ದು, ಆಹಾರ ಸುರಕ್ಷತಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಕರಣದಲ್ಲಿ ಸೋಲಾಪುರ, ಅಹಮದ್ನಗರ ಮೂಲದ ಕೆಲ ವ್ಯಕ್ತಿಗಳ ಜೊತೆಗೆ ಶಿವಮೊಗ್ಗ ಮೂಲದ ಟ್ರೇಡರ್ಸ್ ಹಾಗೂ ಛತ್ತೀಸ್ಗಢ, ದೆಹಲಿಯ ಎರಡು ಟ್ರೇಡರ್ಸ್ ಸೇರಿದಂತೆ ಒಟ್ಟು ಎಂಟು ಮಂದಿ ಹಾಗೂ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕಾರ್ಯಾಚರಣೆಯಲ್ಲಿ ಮೂರು ಲಾರಿಗಳಿಂದ ಒಟ್ಟು 1,265 ಚೀಲಗಳ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ತೂಕ 88,544 ಕೆ.ಜಿ. ಆಗಿದ್ದು, ಅಂದಾಜು ಮೌಲ್ಯ ₹2,34,64,160 ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಗಳು ಸೇರಿ ಮಾನವ ಸೇವನೆಗೆ ಅಸುರಕ್ಷಿತವಾಗಿರಬಹುದಾದ ಅಡಿಕೆಯನ್ನು ಸಾಗಾಟ, ಖರೀದಿ ಮತ್ತು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
Food Safety Department officials in Maharashtra’s Hingoli district seized 88,544 kg of suspected unsafe arecanut worth ₹2.34 crore. Eight persons and firms, including traders from Shivamogga, have been booked, while three individuals have been taken into custody for further investigation.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…