Advertisement
MIRROR FOCUS

ಸೌರ ಮಿಷನ್ ಆದಿತ್ಯ-L1ನಿಂದ ಐತಿಹಾಸಿಕ ಸಾಧನೆ | ಪ್ರಭಾವಲಯದ ಮೊದಲ ಸುತ್ತನ್ನು ಪೂರ್ಣಗೊಳಿಸಿದ ಆದಿತ್ಯ-ಎಲ್1 – ಇಸ್ರೋದಿಂದ ಮಾಹಿತಿ

Share

ನಮ್ಮ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO) ಚಂದ್ರಯಾನ -2ರ(Chandrayana-2) ಯಶಸ್ಸಿನ ನಂತರ ದೇಶದ ಮೊದಲ ಸೌರ ಮಿಷನ್ ಆದಿತ್ಯ-L1 (Aditya L1) ಬಾಹ್ಯಾಕಾಶ ನೌಕೆಯನ್ನು(spaceship) ಉಡ್ಡಯಿಸಿತ್ತು. ಅದೀಗ ಸೂರ್ಯ-ಭೂಮಿಯ L1 ಬಿಂದುವಿನ ಸುತ್ತ ತನ್ನ ಮೊದಲ ಹಾಲೋ ಕಕ್ಷೆಯನ್ನು ಪೂರ್ಣಗೊಳಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ ನಿಷ್ಕ್ರಿಯವಾಗುವ ‘ಲ್ಯಾಗ್ರೇಂಜ್‌ ಪಾಯಿಂಟ್‌’ನ (L1) ಪ್ರಭಾವಲಯದ (Halo) ಮೊದಲ ಸುತ್ತನ್ನು ಆದಿತ್ಯ-ಎಲ್1 ಪೂರ್ಣಗೊಳಿಸಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ಕುರಿತು ಪ್ರಕಟಣೆ ಹೊರಡಿಸಿದೆ.

ಆದಿತ್ಯ-L1 ಮಿಷನ್ ಭಾರತೀಯ ಸೌರ ವೀಕ್ಷಣಾಲಯವಾಗಿದ್ದು, ಇದು ಲಾಗ್ರಾಂಜಿಯನ್ ಪಾಯಿಂಟ್ L1 ನಲ್ಲಿದೆ. ಕಳೆದ ವರ್ಷ ಅಂದರೆ ಸೆಪ್ಟೆಂಬರ್ 2, 2023 ರಂದು, ಇದನ್ನು ಭೂಮಿಯಿಂದ ಬಾಹ್ಯಾಕಾಶಕ್ಕೆ ಕಳುಹಿಸಲಾಗಿತ್ತು. ಈ ವರ್ಷ, ಜನವರಿ 4, 2024 ರಂದು, ಆದಿತ್ಯ-ಎಲ್1 ಅನ್ನು ಉದ್ದೇಶಿತ ಹಾಲೋ ಕಕ್ಷೆಯಲ್ಲಿ ಇರಿಸಲಾಗಿತ್ತು. ಈ ಬಗ್ಗೆ ಇಸ್ರೋ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಎಲ್1 ಬಿಂದುವಿನ ಸುತ್ತ ಒಂದು ಸುತ್ತನ್ನು ಪೂರ್ಣಗೊಳಿಸಲು 178 ದಿನಗಳನ್ನು ತೆಗೆದುಕೊಂಡಿತು ಎಂದು ಇಸ್ರೋ ಹೇಳಿದೆ. ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಒಂದು ಸುತ್ತನ್ನು ಪೂರ್ಣಗೊಳಿಸಲು 178 ದಿನಗಳನ್ನು ತೆಗೆದುಕೊಂಡಿದೆ. ಇದರೊಂದಿಗೆ ಎರಡನೇ ಸುತ್ತಿನತ್ತ ಆದಿತ್ಯ ಎಲ್‌ 1 ಮಿಷನ್‌ ದಾಪುಗಾಲು ಇಟ್ಟಿದೆ. ಎರಡನೇ ಹಾಲೋ ಕಕ್ಷೆಯಲ್ಲಿ ವಾಹನದ ಚಲನೆಯನ್ನು ಯಾವುದೇ ತೊಂದರೆಯಿಲ್ಲದೆ ಖಚಿತಪಡಿಸಿಕೊಳ್ಳಲು ಕಕ್ಷೆಯನ್ನು ಸ್ಥಿರವಾಗಿಡಲು ಮಂಗಳವಾರವೂ ಹೊಂದಾಣಿಕೆಗಳನ್ನು ಮಾಡಲಾಗಿದೆ ಎಂದು ಇಸ್ರೋ ಹೇಳಿದೆ.

ಇಸ್ರೋ ತನ್ನ ಹೇಳಿಕೆಯಲ್ಲಿ ಹೇಳಿದ್ದೇನು?: ಈ ಕುರಿತು ಇಸ್ರೋ, ಹಾಲೋ ಆರ್ಬಿಟ್‌ನಲ್ಲಿ ತನ್ನ ಪ್ರಯಾಣದ ಸಮಯದಲ್ಲಿ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಅನೇಕ ಎದುರಾಳಿ ಶಕ್ತಿಗಳೊಂದಿಗೆ ಸಂಪರ್ಕಕ್ಕೆ ಬರುತ್ತದೆ, ಇದರಿಂದಾಗಿ ಅದು ಉದ್ದೇಶಿತ ಕಕ್ಷೆಯಿಂದ ಹೊರಬರುತ್ತದೆ. ಈ ಕಾರಣಕ್ಕಾಗಿ, ಆದಿತ್ಯ-L1 ಅನ್ನು ಈ ಕಕ್ಷೆಯಲ್ಲಿ ಇರಿಸಲು, ಅದರ ಮಾರ್ಗವನ್ನು ಫೆಬ್ರವರಿ 22 ಮತ್ತು ಜೂನ್ 7 ರಂದು ಎರಡು ಬಾರಿ ಬದಲಾಯಿಸಲಾಯಿತು. ಅಂತಹ ಪರಿಸ್ಥಿತಿಯಲ್ಲಿ, ವಾಹನವು L1 ಸುತ್ತ ಎರಡನೇ ಹಾಲೋ ಕಕ್ಷೆಯಲ್ಲಿ ತನ್ನ ಪ್ರಯಾಣವನ್ನು ಮುಂದುವರೆಸಬಹುದು ಎಂದು ಖಚಿತಪಡಿಸಿಕೊಳ್ಳಲಾಯಿತು’ ಎಂದು ಹೇಳಿದೆ. ಹೆಚ್ಚಿನ ಮಾಹಿತಿಯನ್ನು ನೀಡುತ್ತಾ, ಇಸ್ರೋ ಇಂದಿನ ಬದಲಾವಣೆಯ ನಂತರ, ಯುಆರ್‌ಎಸ್‌ಸಿ-ಇಸ್ರೋದಲ್ಲಿ ಅಭಿವೃದ್ಧಿಪಡಿಸಲಾದ ಅತ್ಯಾಧುನಿಕ ಫ್ಲೈಟ್ ಡೈನಾಮಿಕ್ಸ್ ಸಾಫ್ಟ್‌ವೇರ್ ಅನ್ನು ಆದಿತ್ಯ-ಎಲ್ 1 ಮಿಷನ್‌ಗಾಗಿ ಸಂಪೂರ್ಣವಾಗಿ ಸ್ಥಾಪಿಸಲಾಗಿದೆ.

ಭಾರತದ ಮೊದಲ ಸೂರ್ಯ ಮಿಷನ್ ಆದಿತ್ಯ-ಎಲ್1: ಆದಿತ್ಯ-ಎಲ್ 1 ಮಿಷನ್‌ ಸೂರ್ಯನ ಕುರಿತು ಅಧ್ಯಯನ ಮಾಡುವ ಭಾರತದ ಮೊದಲ ಮಿಷನ್ ಆಗಿದೆ. ಸೂರ್ಯನು ಸಕ್ರಿಯವಾಗಿದ್ದಾಗ ಏನಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಈ ಕಾರ್ಯಾಚರಣೆಯ ಉದ್ದೇಶವಾಗಿದೆ. ಈ ಕಾರ್ಯಾಚರಣೆಗೆ 400 ಕೋಟಿ ರೂಪಾಯಿ ಹಣ ವೆಚ್ಚ ಮಾಡಿ ಇಸ್ರೋ ಇದನ್ನು ಕಳೆದ ವರ್ಷ ಸೆಪ್ಟೆಂಬರ್ 2 ರಂದು ಉಡಾವಣೆ ಮಾಡಿತ್ತು. ದೇಶದ ಮೊದಲ ಸೌರ ಮಿಷನ್ ಆದಿತ್ಯ-L1 ಬಾಹ್ಯಾಕಾಶ ನೌಕೆಯು ಸೂರ್ಯ-ಭೂಮಿಯ L1 ಬಿಂದುವಿನ ಸುತ್ತ ತನ್ನ ಮೊದಲ ಹಾಲೋ ಕಕ್ಷೆಯನ್ನು ಪೂರ್ಣಗೊಳಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿರೋದು ಭಾರತದ ವಿಜ್ಞಾನಿಗಳಿಗೆ ಹರ್ಷ ತಂದಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

10 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

17 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago