Advertisement
MIRROR FOCUS

ಎಚ್‌ಎಂಪಿವಿ ವೈರಸ್ | ಆತಂಕ ಬೇಡ… ಆತಂಕ ಬೇಡ…. ಆತಂಕ ಬೇಡ | ಎಲ್ಲರಿಂದಲೂ ಸ್ಪಷ್ಟನೆ | ಆದರೂ ಇರಲಿ ಎಚ್ಚರಿಕೆ |

Share

ಎಚ್‌ಎಂಪಿವಿ ವೈರಸ್ ಪ್ರಕರಣಗಳು ಪತ್ತೆಯಾಗಿದ್ದರೂ ಸಹ ಯಾವುದೇ ರೀತಿಯ ಆತಂಕ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸ್ಪಷ್ಟಪಡಿಸಿದ್ದಾರೆ.

ಚೀನಾದಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಸೋಂಕಿನ ಎರಡು ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಆದರೆ ಆರೋಗ್ಯ ತಜ್ಞರು HMPV ಹೊಸ ಬಗೆಯ ಸೋಂಕಲ್ಲ. ಈ ಸೋಕು 2001ರಲ್ಲೇ ಮೊದಲ ಬಾರಿಗೆ ಗುರುತಿಸಲಾಗಿತ್ತು. ಮತ್ತು ಇದು ಹಲವು ವರ್ಷಗಳಿಂದ ಜಗತ್ತಿನೆಲ್ಲೆಡೆ ಹರಡುತ್ತಿದೆ. ಗಾಳಿಯ ಮೂಲಕ ಹರಡುವ ಈ ಸೋಂಕು ಎಲ್ಲ ವರ್ಗದವರಿಗೂ ತಗಲುವ ಸಾಧ್ಯತೆ ಇದೆ. ಆದರೆ ಯಾವುದೇ ಆತಂಕ ಪಡುವಂತಿಲ್ಲ ಎಂದು ಹೇಳಿದ್ದಾರೆ.

Advertisement

ಆದರೂ ದೇಶಾದ್ಯಂತ ಎಲ್ಲ ಆರೋಗ್ಯ ವ್ಯವಸ್ಥೆಗಳ ಮೇಲೆ ನಿಗಾ ಇಡಲಾಗಿದೆ. ಹಾಗೂ ದೇಶ ಎಂತಹುದೇ ಆರೋಗ್ಯ ಸವಾಲುಗಳು ಎದುರಾದರೂ ಅದನ್ನು ಹತ್ತಿಕ್ಕಲು ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ, ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, HMPV ಸೋಂಕು ಹೊಸದೇನಲ್ಲ. ಅದು ಈಗಾಗಲೇ ಜಗತ್ತಿನೆಲ್ಲೆಡೆ ಇದೆ. ಇದರಿಂದ ಯಾವುದೇ ತೊಂದರೆ ಇಲ್ಲ. ಸಂಭವನೀಯ ಪರಿಸ್ಥಿತಿಗಳನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಆತಂಕ ಬೇಡ : ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಹೀಗಾಗಿ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನಲ್ಲಿ ಮಗುವೊಂದರಲ್ಲಿ ಕಂಡುಬಂದಿರುವ ವೈರಸ್ ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ಇದು ನಿಜವಲ್ಲ ಎಂದು ಹೇಳಿದ್ದಾರೆ.ಈ ವೈರಸ್ ಕಡಿಮೆ ಇಮ್ಯೂನಿಟಿ ಹೊಂದಿರುವ ಮಕ್ಕಳಿಗೆ ಬಂದಿದ್ದು, ಮಗುವಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಇಲ್ಲಿ ಕಂಡುಬಂದಿರುವ ವೈರಸ್‌ಗೂ  ಚೀನಾ ವೈರಸ್‌ಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

Advertisement

ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೆ, ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಈ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ದಿನೇಶ್‌ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ವೈರಸ್ ಬಗ್ಗೆ ಹೆಚ್ಚಿನ ಆತಂಕ ಅಗತ್ಯವಿಲ್ಲ  : ಸಂಸದ ಡಾ.ಕೆ.ಸುಧಾಕರ್

Advertisement

ಎಚ್.ಎಮ್.ಪಿ ವೈರಸ್ ಬಗ್ಗೆ ಹೆಚ್ಚಿನ ಆತಂಕ ಅಗತ್ಯವಿಲ್ಲ, ಆದರೂ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ ಎಂದು ಮಾಜಿ ಆರೋಗ್ಯ ಸಚಿವರೂ ಆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ, ವಿಶ್ವಸಂಸ್ಥೆ ಮತ್ತು ಕೇಂದ್ರ ಸರ್ಕಾರ ಎಚ್.ಎಮ್.ಪಿ  ಬಗ್ಗೆ ಜಾಗೃತಿ ಮೂಡಿಸಲು ಮುನ್ನೆಚ್ಚರಿಕಾ ಕ್ರಮಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

4 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

4 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

20 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

21 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago