Advertisement
MIRROR FOCUS

ಎಚ್‌ಎಂಪಿವಿ ವೈರಸ್ | ಆತಂಕ ಬೇಡ… ಆತಂಕ ಬೇಡ…. ಆತಂಕ ಬೇಡ | ಎಲ್ಲರಿಂದಲೂ ಸ್ಪಷ್ಟನೆ | ಆದರೂ ಇರಲಿ ಎಚ್ಚರಿಕೆ |

Share

ಎಚ್‌ಎಂಪಿವಿ ವೈರಸ್ ಪ್ರಕರಣಗಳು ಪತ್ತೆಯಾಗಿದ್ದರೂ ಸಹ ಯಾವುದೇ ರೀತಿಯ ಆತಂಕ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಸ್ಪಷ್ಟಪಡಿಸಿದ್ದಾರೆ.

ಚೀನಾದಲ್ಲಿ ಕಾಣಿಸಿಕೊಂಡಿರುವ ಎಚ್‌ಎಂಪಿವಿ ವೈರಸ್ ಸೋಂಕಿನ ಎರಡು ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿವೆ. ಆದರೆ ಆರೋಗ್ಯ ತಜ್ಞರು HMPV ಹೊಸ ಬಗೆಯ ಸೋಂಕಲ್ಲ. ಈ ಸೋಕು 2001ರಲ್ಲೇ ಮೊದಲ ಬಾರಿಗೆ ಗುರುತಿಸಲಾಗಿತ್ತು. ಮತ್ತು ಇದು ಹಲವು ವರ್ಷಗಳಿಂದ ಜಗತ್ತಿನೆಲ್ಲೆಡೆ ಹರಡುತ್ತಿದೆ. ಗಾಳಿಯ ಮೂಲಕ ಹರಡುವ ಈ ಸೋಂಕು ಎಲ್ಲ ವರ್ಗದವರಿಗೂ ತಗಲುವ ಸಾಧ್ಯತೆ ಇದೆ. ಆದರೆ ಯಾವುದೇ ಆತಂಕ ಪಡುವಂತಿಲ್ಲ ಎಂದು ಹೇಳಿದ್ದಾರೆ.

ಆದರೂ ದೇಶಾದ್ಯಂತ ಎಲ್ಲ ಆರೋಗ್ಯ ವ್ಯವಸ್ಥೆಗಳ ಮೇಲೆ ನಿಗಾ ಇಡಲಾಗಿದೆ. ಹಾಗೂ ದೇಶ ಎಂತಹುದೇ ಆರೋಗ್ಯ ಸವಾಲುಗಳು ಎದುರಾದರೂ ಅದನ್ನು ಹತ್ತಿಕ್ಕಲು ಸನ್ನದ್ಧವಾಗಿದೆ ಎಂದು ಹೇಳಿದ್ದಾರೆ. ಈ ಮಧ್ಯೆ, ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, HMPV ಸೋಂಕು ಹೊಸದೇನಲ್ಲ. ಅದು ಈಗಾಗಲೇ ಜಗತ್ತಿನೆಲ್ಲೆಡೆ ಇದೆ. ಇದರಿಂದ ಯಾವುದೇ ತೊಂದರೆ ಇಲ್ಲ. ಸಂಭವನೀಯ ಪರಿಸ್ಥಿತಿಗಳನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಆತಂಕ ಬೇಡ : ಎಚ್‌ಎಂಪಿವಿ ಹೊಸ ವೈರಸ್ ಅಲ್ಲ. ಹೀಗಾಗಿ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರಿನಲ್ಲಿ ಮಗುವೊಂದರಲ್ಲಿ ಕಂಡುಬಂದಿರುವ ವೈರಸ್ ಭಾರತದಲ್ಲಿ ಇದು ಮೊದಲ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ಇದು ನಿಜವಲ್ಲ ಎಂದು ಹೇಳಿದ್ದಾರೆ.ಈ ವೈರಸ್ ಕಡಿಮೆ ಇಮ್ಯೂನಿಟಿ ಹೊಂದಿರುವ ಮಕ್ಕಳಿಗೆ ಬಂದಿದ್ದು, ಮಗುವಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಇಲ್ಲಿ ಕಂಡುಬಂದಿರುವ ವೈರಸ್‌ಗೂ  ಚೀನಾ ವೈರಸ್‌ಗೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೆ, ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ. ಈ ವೈರಸ್‌ನಿಂದ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ದಿನೇಶ್‌ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ವೈರಸ್ ಬಗ್ಗೆ ಹೆಚ್ಚಿನ ಆತಂಕ ಅಗತ್ಯವಿಲ್ಲ  : ಸಂಸದ ಡಾ.ಕೆ.ಸುಧಾಕರ್

ಎಚ್.ಎಮ್.ಪಿ ವೈರಸ್ ಬಗ್ಗೆ ಹೆಚ್ಚಿನ ಆತಂಕ ಅಗತ್ಯವಿಲ್ಲ, ಆದರೂ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ ಎಂದು ಮಾಜಿ ಆರೋಗ್ಯ ಸಚಿವರೂ ಆದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ, ವಿಶ್ವಸಂಸ್ಥೆ ಮತ್ತು ಕೇಂದ್ರ ಸರ್ಕಾರ ಎಚ್.ಎಮ್.ಪಿ  ಬಗ್ಗೆ ಜಾಗೃತಿ ಮೂಡಿಸಲು ಮುನ್ನೆಚ್ಚರಿಕಾ ಕ್ರಮಗಳ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರವು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

22 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago