ರಾಜ್ಯ ಸರ್ಕಾರ 4600 ಕೋಟಿ ರೂಪಾಯಿ ವೆಚ್ಚದಲ್ಲಿ ಜಾರಿ ಮಾಡಲಿರುವ ಹೊಗೇನಕಲ್ ಕುಡಿಯುವ ನೀರಿನ ಎರಡನೇ ಯೋಜನೆಗೆ ಕರ್ನಾಟಕ ರಾಜ್ಯ ವ್ಯಕ್ತಪಡಿಸಿರುವ ಆಕ್ಷೇಪವನ್ನು ತಳ್ಳಿಹಾಕಿರುವ ತಮಿಳುನಾಡು ಜಲ ಸಂಪನ್ಮೂಲ ಸಚಿವ ರುರೈ ಮುರುಗನ್, ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡಿಗೆ ಎಲ್ಲಾ ಕಾನೂನು ಹಕ್ಕುಗಳಿವೆ ಎಂದು ಹೇಳಿದ್ದಾರೆ.
ಶನಿವಾರದ ಸಭೆಯಲ್ಲಿ ಕೃಷ್ಣಾ ಮತ್ತು ಕಾವೇರಿ ನದಿ ಜಲಾನಯನ ಪ್ರದೇಶಗಳಿಗೆ ಸಂಬಂಧಿಸಿದ ಕಾನೂನು ವಿವಾದಗಳು ಮತ್ತು ಮಹದಾಯಿ ಯೋಜನೆ ಕುರಿತು ಚರ್ಚಿಸಲಾಯಿತು.
ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟ ಸಹದ್ಯೋಗಿಗಳೊಂದಿಗೆ ವರ್ಚುವಲ್ ಸಭೆಯ ನಂತರ, ಅಂತಾರಾಜ್ಯ ನದಿ ವಿವಾದಗಳ ಕುರಿತು ತಮಿಳುನಾಡು ವಿರುದ್ಧ ವಾಗ್ದಾಳಿ ನಡೆಸಲು ರಾಜ್ಯ ಸಿದ್ಧತೆ ನಡೆಸುತ್ತಿದ್ದು, ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

