Advertisement
ಸುದ್ದಿಗಳು

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

Share

ಬಣ್ಣಗಳ ಹಬ್ಬ ಹೋಳಿ ಮಾರ್ಚ್ 4ರಂದು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಈ ವೇಳೆ ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕೆಂದು  ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಮನವಿ ಮಾಡಿದೆ.

ಹೋಳಿ ಹಬ್ಬವು ಸಂತೋಷ, ಸಾಮರಸ್ಯ ಮತ್ತು ವಿಜಯದ ಸಂಕೇತ. ಆದರೆ ಜೋರಾದ ಶಬ್ದಗಳು, ಹಠಾತ್ ಬಣ್ಣ ಎರಚುವುದು, ನೀರಿನ ಬಲೂನ್‌ಗಳನ್ನು ಎಸೆಯುವುದು ಮತ್ತು ಆಕ್ರಮಣಕಾರಿ ನಡವಳಿಕೆಗಳು ಸಾಕುಪ್ರಾಣಿಗಳು ಹಾಗೂ ಬೀದಿ ಪ್ರಾಣಿಗಳಿಗೆ ಭಯ, ಒತ್ತಡ ಮತ್ತು ಗಂಭೀರ ಗಾಯಗಳಿಗೆ ಕಾರಣವಾಗಬಹುದು ಎಂದು ತಿಳಿಸಲಾಗಿದೆ.

ಪ್ರಾಣಿಗಳನ್ನು ಬೆನ್ನಟ್ಟುವುದು ಅಥವಾ ಬಲವಂತವಾಗಿ ಬಣ್ಣ ಬಳಿಯುವುದು ಕ್ರೌರ್ಯಕ್ಕೆ ಸಮಾನವಾಗಿದ್ದು, ಇದು ಕಾನೂನುಬದ್ಧವಾಗಿ ದಂಡನೀಯವೂ ಆಗಿದೆ.

 ಪಾಲಿಸಬೇಕಾದ ಸೂಚನೆಗಳು:

  • ಸಾಕುಪ್ರಾಣಿಗಳು, ಬೀದಿ ಪ್ರಾಣಿಗಳು ಮತ್ತು ಪಕ್ಷಿಗಳ ಮೇಲೆ ಬಣ್ಣಗಳನ್ನು ಎರಚಬೇಡಿ.

  • ನೀರಿನ ಬಲೂನ್‌ಗಳು ಹಾಗೂ ಬಣ್ಣದ ನೀರನ್ನು ಪ್ರಾಣಿಗಳ ಮೇಲೆ ಸಿಂಪಡಿಸುವುದನ್ನು ತಪ್ಪಿಸಿ.

  • ಸಾಕುಪ್ರಾಣಿಗಳನ್ನು ಶಾಂತ ಮತ್ತು ಸುರಕ್ಷಿತ ಸ್ಥಳದಲ್ಲಿ ಇರಿಸಿ.

  • ಹಬ್ಬದ ನಂತರ ಬಣ್ಣದ ಅವಶೇಷ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸ್ವಚ್ಛಗೊಳಿಸಿ.

  • ಪ್ರಾಣಿ ಬಣ್ಣಕ್ಕೆ ಒಡ್ಡಿಕೊಂಡರೆ ಶುದ್ಧ ನೀರಿನಿಂದ ನಿಧಾನವಾಗಿ ತೊಳೆಯಿ; ಅಗತ್ಯವಿದ್ದರೆ ಪಶುವೈದ್ಯಕೀಯ ನೆರವು ಪಡೆಯಿ.

ಮಕ್ಕಳು ಹಾಗೂ ಯುವಕರಲ್ಲಿ ಪ್ರಾಣಿ ಸ್ನೇಹಿ ಹೋಳಿ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನೈಸರ್ಗಿಕ ಬಣ್ಣಗಳನ್ನು ಮನುಷ್ಯರಿಗೆ ಮಾತ್ರ ಬಳಸಿ, ಪರಿಸರ ಸ್ನೇಹಿ ಹಾಗೂ ಕ್ರೌರ್ಯ-ಮುಕ್ತ ಹಬ್ಬವನ್ನು ಆಚರಿಸಬೇಕೆಂದು ಪ್ರಕಟಣೆ ತಿಳಿಸಿದೆ.

The Animal Welfare Board of India has urged citizens to celebrate Holi responsibly without causing harm to animals and birds. The board advised avoiding colors, water balloons, loud noises, and ensuring pets remain safe indoors during celebrations.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

8 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

17 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

1 day ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

1 day ago

ಶ್ರೀಲಂಕಾದ ರಫ್ತು ಮಾರುಕಟ್ಟೆಯಲ್ಲಿ ಭಾರತದ ಬಲಿಷ್ಠ ಏರಿಕೆ..! – ತೆಂಗು ಆಧಾರಿತ ಉತ್ಪನ್ನಗಳ ರಫ್ತು 23.49 ಶೇಕಡಾ ಏರಿಕೆ

2026 ರ ಜನವರಿ–ಏಪ್ರಿಲ್ ಅವಧಿಯಲ್ಲಿ ಭಾರತವು ಶ್ರೀಲಂಕಾದ ಎರಡನೇ ಅತಿದೊಡ್ಡ ರಫ್ತು ಗಮ್ಯಸ್ಥಾನವಾಗಿ…

1 day ago