ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…