ಹೋಳಿ ಹಬ್ಬದ ಸಂದರ್ಭ ಸಾಕು ಪ್ರಾಣಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕರಾದ ಡಾ.ಪಿ.ಉಮಾಪತಿಯವರು ಸಾರ್ವಜನಿಕರನ್ನು ಆಗ್ರಹಿಸಿದ್ದಾರೆ.
ಇದರಿಂದ ಪ್ರಾಣಿಗಳಿಗೆ ಅಲರ್ಜಿ, ವಾಂತಿ ಹಾಗೂ ಕುರುಡುತನ ಬರುವ ಸಾಧ್ಯತೆ ಇರುತ್ತದೆ. ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ, ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು ಅಂತಹ ಯಾವುದೇ ಪ್ರಕರಣಗಳು ಕಂಡುಬಂದಲ್ಲಿ ಕಾಯ್ದೆಯ ನಿಯಮಗಳ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…