ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |

January 23, 2023
12:51 PM
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಗಂಟು ರೋಗ ಕಾಣಿಸಿಕೊಂಡಿದೆ. ಇದಕ್ಕೆ ಹೋಮಿಯೋಪಥಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಮಾಡಬಲ್ಲ ಔಷಧಿಯ ಬಗ್ಗೆ ವೈದ್ಯ ಡಾ.ಆದಿತ್ಯ ಚಣಿಲ ಮಾಹಿತಿ ನೀಡಿದ್ದಾರೆ. ಅವರ ಬರಹದ ಯಥಾವತ್ತಾದ ರೂಪ ಇಲ್ಲಿದೆ…

ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.

ರೋಗ ಲಕ್ಷಣಗಳೇನು?:

  • ಜ್ವರ
  • ಜ್ವರಕ್ಕೆ ಸಂಬಂಧಿತವಾದ ಗಂಟು ನೋವು ,ಶೀತ ದಿನನಿತ್ಯದ ಚಟುವಟಿಕೆಯಾದ ಮಲ ,ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ ಮತ್ತು ಆಹಾರ ಸೇವನೆ ಕಡಿಮೆಯಾಗುತ್ತದೆ.
  •  ಬಾಯಿ ಮೂಗಿನಿಂದ ಲೊಳೆಯಂತಹ ದ್ರವ
  • ಕೆಲವೊಮ್ಮೆ ಕರುಗಳಲ್ಲಿ ಮಲವು ನೀರಿನಂತಾಗಿ (Diarrhoea)  ಇರುತ್ತದೆ. ಜ್ವರ ಇರುವ ಸಂಧರ್ಬದಲ್ಲಿ ರಾತ್ರಿಯಿಡೀ ಮಲಗದೆ ನಿಂತಿರುವ ಉದಾಹರಣೆಯೂ ಇದೆ.
  •  ಹಾಲು ನೀಡಿವಿಕೆ ಪ್ರಮಾಣದಲ್ಲಿ ಇಳಿಮುಖ.
  • ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗಂಟುಗಳು ಎದ್ದು ಒಡೆಯುವುದು.
  • ದನಗಳು ಶೇ.2ರಷ್ಟು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊದಲೂಬಹುದು.

ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.

ಕೆಲವು ವಿಷಯ ನಮಗೆ ಅರಿತಿರಬೇಕು:

  • ರೋಗ ಇರುವ ದನಗಳಿಂದ ಇಲ್ಲದಿರುವುದನ್ನು ಬೇರ್ಪಡಿಸಬೇಕು.
  • ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು.
  • ಸೋಂಕು ನಿವಾರಣಾ ಚಿಕಿತ್ಸೆ.
  •  ಹೆಚ್ಚಾಗಿ ಬಂದ 15-30 ದಿನದ ಒಳಗಡೆ ಸಂಪೂರ್ಣ ಗುಣ ಮುಖ ಆಗುತ್ತದೆ.

ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.

ಬರಹ :
ಡಾ.ಆದಿತ್ಯ ಚಣಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

ಇದನ್ನೂ ಓದಿ

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror