Advertisement
ಸುದ್ದಿಗಳು

ಜಾನುವಾರುಗಳಿಗೆ ಗಂಟು ರೋಗ | ರೋಗ ಹರಡದಂತೆ ಹೋಮಿಯೋಪಥಿ ಔಷಧಿ ಸಹಕಾರಿ |

Share
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಾನುವಾರುಗಳಿಗೆ ಗಂಟು ರೋಗ ಕಾಣಿಸಿಕೊಂಡಿದೆ. ಇದಕ್ಕೆ ಹೋಮಿಯೋಪಥಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಮಾಡಬಲ್ಲ ಔಷಧಿಯ ಬಗ್ಗೆ ವೈದ್ಯ ಡಾ.ಆದಿತ್ಯ ಚಣಿಲ ಮಾಹಿತಿ ನೀಡಿದ್ದಾರೆ. ಅವರ ಬರಹದ ಯಥಾವತ್ತಾದ ರೂಪ ಇಲ್ಲಿದೆ…

ದ. ಕ ಜಿಲ್ಲೆಯನ್ನು ಸೇರಿಸಿ ದೇಶದ ಹಲವೆಡೆಯಲ್ಲಿ ಜಾನುವಾರುಗಲಿಗೆ ಗಂಟು ರೋಗ ಸಾಂಕ್ರಾಮಿಕವಾಗಿ ಹರಡುತ್ತಲೇ ಇದೆ. ಜಾನುವಾರುಗಳಿಗೆ ಬಂದ ಕಾಯಿಲೆಯು ಜನರ ನಿದ್ದೆ ಕೆಡಿಸಿದೆ. ಹೈನುಗಾರಿಕೆಯೆನ್ನೇ ಅಲವಂಬನೆ ಮಾಡಿರುವ ಕೃಷಿಕರಿಗೆ ಸಂಕಷ್ಟವಾಗಿದೆ. ಇದು ಜಾನುವಾರುಗಳಿಗೆ ಬರುವ ಕಾಯಿಲೆಯಾಗಿದ್ದು, ಮನುಷ್ಯರಿಗೆ ಹರಡುವುದಿಲ್ಲ ಎಂದು ಭಾರತೀಯ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢೀಕರಣ ಪಡಿಸಿದೆ.

ರೋಗ ಲಕ್ಷಣಗಳೇನು?:

  • ಜ್ವರ
  • ಜ್ವರಕ್ಕೆ ಸಂಬಂಧಿತವಾದ ಗಂಟು ನೋವು ,ಶೀತ ದಿನನಿತ್ಯದ ಚಟುವಟಿಕೆಯಾದ ಮಲ ,ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ ಮತ್ತು ಆಹಾರ ಸೇವನೆ ಕಡಿಮೆಯಾಗುತ್ತದೆ.
  • ಬಾಯಿ ಮೂಗಿನಿಂದ ಲೊಳೆಯಂತಹ ದ್ರವ
  • ಕೆಲವೊಮ್ಮೆ ಕರುಗಳಲ್ಲಿ ಮಲವು ನೀರಿನಂತಾಗಿ (Diarrhoea)  ಇರುತ್ತದೆ. ಜ್ವರ ಇರುವ ಸಂಧರ್ಬದಲ್ಲಿ ರಾತ್ರಿಯಿಡೀ ಮಲಗದೆ ನಿಂತಿರುವ ಉದಾಹರಣೆಯೂ ಇದೆ.
  • ಹಾಲು ನೀಡಿವಿಕೆ ಪ್ರಮಾಣದಲ್ಲಿ ಇಳಿಮುಖ.
  • ಶರೀರದಲ್ಲಿ ಅಲ್ಲಲ್ಲಿ ಸಿಡುಬಿನಂತಹ ಗುಳ್ಳೆಗಳು, ಗಂಟುಗಳು ಎದ್ದು ಒಡೆಯುವುದು.
  • ದನಗಳು ಶೇ.2ರಷ್ಟು ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊದಲೂಬಹುದು.

ಒಂದು ಮುಖ್ಯವಾದ ವಿಷಯ ಏನೆಂದರೆ, ಹೇಗೆ ಕೋರೋನಾದ ಸಮಯದಲ್ಲಿ ಇಮ್ಯುನಿಟಿ ಹೆಚ್ಚಿಸುವಲ್ಲಿ ಹೋಮಿಯೋಪಥಿ ಯಶಸ್ವಿಯಾಯಿತು. ಹಾಗೆ ಹೋಮಿಯೋಪಥಿ ಈಗ ಜಾನುವಾರುಗಳ ಇಮ್ಯುನಿಟಿ ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ.

ಕೆಲವು ವಿಷಯ ನಮಗೆ ಅರಿತಿರಬೇಕು:

  • ರೋಗ ಇರುವ ದನಗಳಿಂದ ಇಲ್ಲದಿರುವುದನ್ನು ಬೇರ್ಪಡಿಸಬೇಕು.
  • ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು.
  • ಸೋಂಕು ನಿವಾರಣಾ ಚಿಕಿತ್ಸೆ.
  • ಹೆಚ್ಚಾಗಿ ಬಂದ 15-30 ದಿನದ ಒಳಗಡೆ ಸಂಪೂರ್ಣ ಗುಣ ಮುಖ ಆಗುತ್ತದೆ.

ಹೋಮಿಯೋಪಥಿ: ಇದುವರೆಗೆ ಹಲವಾರು ದನಕರುಗಳು ಹೋಮಿಯೋಪಥಿ ಔಷಧಿಯಿಂದ ಗುಣಮುಖವಾಗಿದ್ದು ಅದರೊಡನೆ ರೋಗ ಹರಡದ ರೀತಿಯಲ್ಲಿ ಇಮ್ಯುನಿಟಿ ಹೆಚ್ಚಿಸಲು ಸಹಕಾರಿಯಾಗಿದೆ. ಹೆಚ್ಚಿನ ದನಕರುಗಳು ಚಿಕಿತ್ಸೆಗೆ ಸ್ಪಂದಿಸಿದೆ.

ಬರಹ :
ಡಾ.ಆದಿತ್ಯ ಚಣಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

10 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago