12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ರಿಕ್ಷಾದಲ್ಲಿ ಬಾಕಿ | ಪ್ರಾಮಾಣಿಕತೆ ಮೆರೆದ ಚಾಲಕ |

November 10, 2022
8:16 PM

ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

Advertisement

ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.

ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.

ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೈಕ್ರೋಪ್ಲಾಸ್ಟಿಕ್‌ಗಳು ಕೃಷಿಗೆ ಅಡ್ಡಿ-ಇಳುವರಿಯ ಮೇಲೆ ಪರಿಣಾಮ | ವಿಜ್ಞಾನಿಗಳಿಂದ ಎಚ್ಚರಿಕೆ |
March 31, 2025
8:00 AM
by: ವಿಶೇಷ ಪ್ರತಿನಿಧಿ
223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ
March 30, 2025
11:24 PM
by: The Rural Mirror ಸುದ್ದಿಜಾಲ
ಜಲಸಂರಕ್ಷಣೆಯ ಮಾದರಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ | 8 ವರ್ಷಗಳಲ್ಲಿ ದೇಶದಲ್ಲಿ 11 ಶತಕೋಟಿ ಘನ ಮೀಟರ್ ನೀರು ಸಂರಕ್ಷಣೆ |
March 30, 2025
10:20 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |
March 30, 2025
9:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group