ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…