ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…
ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…