ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…