ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…