ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…