ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…