ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…