ರಿಕ್ಷಾದಲ್ಲಿ ಮಹಿಳೆ ಬಿಟ್ಟು ಹೋಗಿದ್ದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಾರೀಸುದಾರರಿಗೆ ಮರಳಿಸುವ ಮೂಲಕ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆಯೊಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.
ಬಳ್ಳೂರು ಕಾರೇಕುದ್ರುವಿನ ರಿಕ್ಷಾ ಚಾಲಕ ಪ್ರಕಾಶ್ ನಾಯಕ್ ಅವರ ರಿಕ್ಷಾದಲ್ಲಿ ಲಲಿತಾ ಕೆ. ಎಂಬವರು ಕುಂದಾಪುರ ಪೇಟೆಯಿಂದ ಮನೆಗೆ ತೆರಳಿದ್ದರು.
ರಿಕ್ಷಾ ಇಳಿಯುವ ವೇಳೆ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟು ಹೋಗಿದ್ದರು. ರಿಕ್ಷಾದ ಸೀಟಿನ ಕೆಳಗೆ ಚಿನ್ನಾಭರಣ ನೋಡಿದ ಚಾಲಕ ಪ್ರಕಾಶ್ ನಾಯಕ್, ಅದನ್ನು ಕುಂದಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದರು. ಲಲಿತಾ ಅವರು ಚಿನ್ನ ಕಳೆದುಹೋಗಿರುವ ಬಗ್ಗೆ ಗೊತ್ತಾಗಿ, ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ ಪೊಲೀಸರು ಚಿನ್ನ ಕಳೆದುಕೊಂಡವರು ಲಲಿತಾ ಅವರೇ ಅಂತ ಖಚಿತ ಪಡಿಸಿ ಚಿನ್ನಾಭರಣವನ್ನು ಒಪ್ಪಿಸಿದರು.
ಆಟೋ ಚಾಲಕ ಪ್ರಕಾಶ್ ಪ್ರಾಮಾಣಿಕತೆಗೆ ಪ್ರಶಂಸೆ ವ್ಯಕ್ತವಾಗಿದೆ.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…