Advertisement
The Rural Mirror ಕಾಳಜಿ

ಆ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು….!

Share

ಇದೊಂದು ಅಭಿಪ್ರಾಯವನ್ನು ರೂರಲ್‌ ಮಿರರ್‌ ಪ್ರಕಟಿಸಲು ಆಸಕ್ತಿ ವಹಿಸಿದೆ. ಶ್ರದ್ಧೆ ಹಾಗೂ ಆ ಪ್ರಾಮಾಣಿಕತೆ ಇಡೀ ಸಮುದಾಯಕ್ಕೆ ಮಾದರಿಯಾಗಿದೆ ಕೂಡಾ.  ಬಾಳಿಲದ ವೈದ್ಯರ ಪತ್ನಿ ಬರೆದಿರುವ ಈ ಅಭಿಪ್ರಾಯ ಹೀಗಿದೆ……

ನಮ್ಮ ಬಾಳಿಲದ ಪಕ್ಕದ ಐವರ್ನಾಡಿನಲ್ಲಿ ಒಂದು ಪುಟ್ಟ ಕುಟುಂಬ.ಅಪ್ಪ,ಅಮ್ಮ,ಮಗಳು.  ಮಗಳು ಪೋಲಿಯೋ ಪೀಡಿತೆ  .ಕಾರಣಾಂತರಗಳಿಂದ ಆ ಕುಟುಂಬ ಪುತ್ತೂರಿನ ಪುರುಷರಕಟ್ಟೆಗೆ ಹೋಗಿ ನೆಲೆಸುತ್ತದೆ.

ಹಿಂದಿನಿಂದಲೂ ಬಾಳಿಲದ ಡಾಕ್ಟರ್ ಬಳಿಗೆ ಔಷಧಕ್ಕೆ ಬರುತ್ತಿದ್ದವರು ಊರು ಬದಲಾದರೂ ವೈದ್ಯರನ್ನು ಬದಲಿಸಿಲ್ಲ. ಈ ಮಧ್ಯೆ ಅಮ್ಮ ಕಿಡ್ನಿ ಸಮಸ್ಯೆಯಿಂದ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುತ್ತಾರೆ.ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಡುತ್ತಾರೆ. 

ಬಾಳಿಲದ ವೈದ್ಯರು ವಿಧಿವಶರಾದಾಗ ಕ್ಲಿನಿಕ್ ಗೆ ಬೇರೆ ವೈದ್ಯರು ಬರುತ್ತಾರಾ ಅಂತ ವಿಚಾರಿಸಿಕೊಳ್ತಾರೆ. ನಿರಾಶರಾಗ್ತಾರೆ. ಆಗ ಅವರು ಹೇಳುತ್ತಾರೆ, ನಾವು ಸ್ವಲ್ಪ ದುಡ್ಡು ಕೊಡಲು ಇದೆ ಡಾಕ್ಟರ್ ಗೆ, ಕೊಡ್ತೇವೆ ಅಂತ ಹೇಳಿದ್ದರು.

ಆ 6 ತಿಂಗಳ ಬಳಿಕ ಮೊನ್ನೆ ಕರೆ ಮಾಡಿ ತಿಳಿಸಿದರು. ನಾಳೆ ಬಂದು ದುಡ್ಡು ಕೊಡ್ತೇವೆ ಅಂತ. ತೊಂದರೆ ಇಲ್ಲಮ್ಮ , ನೀವು ಕೊಡ್ಬೇಕಾಗಿಲ್ಲ ಅಂತ ಹೇಳಿದ್ದಕ್ಕೆ. ಇಲ್ಲ, ಕೊಡುತ್ತೇವೆ ತಕೊಳ್ಬೇಕು ಅಂತ ಉತ್ತರ ನೀಡಿದ್ದರು.

ಮರುದಿನ ಆ ಹುಡುಗಿಯ ತಂದೆ ಬಂದು,  ಪಶ್ಚಾತ್ತಾಪದಿಂದ “ಆಜಿ ತಿಂಗಳಾಂಡ್ ಎಂದು ಹೇಳುತ್ತಾ 300 ರೂಪಾಯಿ ಕೊಟ್ಟಾಗ,  ಒಂದು ಮಾತೂ ಬಾರದ ಸ್ಥಿತಿಯಲ್ಲಿ ಧಾರಾಕಾರ ಕಣ್ಣೀರು ಸುರಿಸಬೇಕಾಯಿತು.

ನಿಜವಾಗಿಯೂ ಡಾಕ್ಟರ್ ಗೆ ಸಲ್ಲ ಬೇಕಾದ ಹಣ ಎಷ್ಟಿದೆಯೋ. ಸಲ್ಲಿಸಬೇಕಾದವರು ಎಷ್ಟು ಜನರಿದ್ದಾರೋ ತಿಳಿಯದು….? ಆದರೆ ತಾವಾಗಿ ಹೇಳಿ ತಂದು ಕೊಟ್ಟ ಆ 300  ರೂಪಾಯಿ ಮೌಲ್ಯಕ್ಕಿಂತಲೂ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು. 

ಇಂತಹ ಪ್ರಾಮಾಣಿಕತೆಗೆ  ಮನಸಾರೆ ವಂದಿಸುತ್ತಾ ಪ್ರಾರ್ಥಿಸುತ್ತಿದ್ದೇನೆ, ಈ ಕುಟುಂಬ ನೆಮ್ಮದಿಯ ಸುಖ ಸಂತೋಷದ ಬದುಕು ಕಂಡು ಕೊಳ್ಳುವಂತಾಗಲಿ.

# ಚಿಕಿತ್ಸಾ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

4 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

4 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

9 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

9 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

9 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

9 hours ago