The Rural Mirror ಕಾಳಜಿ

ಆ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇದೊಂದು ಅಭಿಪ್ರಾಯವನ್ನು ರೂರಲ್‌ ಮಿರರ್‌ ಪ್ರಕಟಿಸಲು ಆಸಕ್ತಿ ವಹಿಸಿದೆ. ಶ್ರದ್ಧೆ ಹಾಗೂ ಆ ಪ್ರಾಮಾಣಿಕತೆ ಇಡೀ ಸಮುದಾಯಕ್ಕೆ ಮಾದರಿಯಾಗಿದೆ ಕೂಡಾ.  ಬಾಳಿಲದ ವೈದ್ಯರ ಪತ್ನಿ ಬರೆದಿರುವ ಈ ಅಭಿಪ್ರಾಯ ಹೀಗಿದೆ……

Advertisement

ನಮ್ಮ ಬಾಳಿಲದ ಪಕ್ಕದ ಐವರ್ನಾಡಿನಲ್ಲಿ ಒಂದು ಪುಟ್ಟ ಕುಟುಂಬ.ಅಪ್ಪ,ಅಮ್ಮ,ಮಗಳು.  ಮಗಳು ಪೋಲಿಯೋ ಪೀಡಿತೆ  .ಕಾರಣಾಂತರಗಳಿಂದ ಆ ಕುಟುಂಬ ಪುತ್ತೂರಿನ ಪುರುಷರಕಟ್ಟೆಗೆ ಹೋಗಿ ನೆಲೆಸುತ್ತದೆ.

ಹಿಂದಿನಿಂದಲೂ ಬಾಳಿಲದ ಡಾಕ್ಟರ್ ಬಳಿಗೆ ಔಷಧಕ್ಕೆ ಬರುತ್ತಿದ್ದವರು ಊರು ಬದಲಾದರೂ ವೈದ್ಯರನ್ನು ಬದಲಿಸಿಲ್ಲ. ಈ ಮಧ್ಯೆ ಅಮ್ಮ ಕಿಡ್ನಿ ಸಮಸ್ಯೆಯಿಂದ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುತ್ತಾರೆ.ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಡುತ್ತಾರೆ. 

ಬಾಳಿಲದ ವೈದ್ಯರು ವಿಧಿವಶರಾದಾಗ ಕ್ಲಿನಿಕ್ ಗೆ ಬೇರೆ ವೈದ್ಯರು ಬರುತ್ತಾರಾ ಅಂತ ವಿಚಾರಿಸಿಕೊಳ್ತಾರೆ. ನಿರಾಶರಾಗ್ತಾರೆ. ಆಗ ಅವರು ಹೇಳುತ್ತಾರೆ, ನಾವು ಸ್ವಲ್ಪ ದುಡ್ಡು ಕೊಡಲು ಇದೆ ಡಾಕ್ಟರ್ ಗೆ, ಕೊಡ್ತೇವೆ ಅಂತ ಹೇಳಿದ್ದರು.

Advertisement

ಆ 6 ತಿಂಗಳ ಬಳಿಕ ಮೊನ್ನೆ ಕರೆ ಮಾಡಿ ತಿಳಿಸಿದರು. ನಾಳೆ ಬಂದು ದುಡ್ಡು ಕೊಡ್ತೇವೆ ಅಂತ. ತೊಂದರೆ ಇಲ್ಲಮ್ಮ , ನೀವು ಕೊಡ್ಬೇಕಾಗಿಲ್ಲ ಅಂತ ಹೇಳಿದ್ದಕ್ಕೆ. ಇಲ್ಲ, ಕೊಡುತ್ತೇವೆ ತಕೊಳ್ಬೇಕು ಅಂತ ಉತ್ತರ ನೀಡಿದ್ದರು.

Advertisement

ಮರುದಿನ ಆ ಹುಡುಗಿಯ ತಂದೆ ಬಂದು,  ಪಶ್ಚಾತ್ತಾಪದಿಂದ “ಆಜಿ ತಿಂಗಳಾಂಡ್ ಎಂದು ಹೇಳುತ್ತಾ 300 ರೂಪಾಯಿ ಕೊಟ್ಟಾಗ,  ಒಂದು ಮಾತೂ ಬಾರದ ಸ್ಥಿತಿಯಲ್ಲಿ ಧಾರಾಕಾರ ಕಣ್ಣೀರು ಸುರಿಸಬೇಕಾಯಿತು.

ನಿಜವಾಗಿಯೂ ಡಾಕ್ಟರ್ ಗೆ ಸಲ್ಲ ಬೇಕಾದ ಹಣ ಎಷ್ಟಿದೆಯೋ. ಸಲ್ಲಿಸಬೇಕಾದವರು ಎಷ್ಟು ಜನರಿದ್ದಾರೋ ತಿಳಿಯದು….? ಆದರೆ ತಾವಾಗಿ ಹೇಳಿ ತಂದು ಕೊಟ್ಟ ಆ 300  ರೂಪಾಯಿ ಮೌಲ್ಯಕ್ಕಿಂತಲೂ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು. 

ಇಂತಹ ಪ್ರಾಮಾಣಿಕತೆಗೆ  ಮನಸಾರೆ ವಂದಿಸುತ್ತಾ ಪ್ರಾರ್ಥಿಸುತ್ತಿದ್ದೇನೆ, ಈ ಕುಟುಂಬ ನೆಮ್ಮದಿಯ ಸುಖ ಸಂತೋಷದ ಬದುಕು ಕಂಡು ಕೊಳ್ಳುವಂತಾಗಲಿ.

# ಚಿಕಿತ್ಸಾ ಬಾಳಿಲ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

1 hour ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

3 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

4 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

10 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

17 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

17 hours ago