ಇದೊಂದು ಅಭಿಪ್ರಾಯವನ್ನು ರೂರಲ್ ಮಿರರ್ ಪ್ರಕಟಿಸಲು ಆಸಕ್ತಿ ವಹಿಸಿದೆ. ಶ್ರದ್ಧೆ ಹಾಗೂ ಆ ಪ್ರಾಮಾಣಿಕತೆ ಇಡೀ ಸಮುದಾಯಕ್ಕೆ ಮಾದರಿಯಾಗಿದೆ ಕೂಡಾ. ಬಾಳಿಲದ ವೈದ್ಯರ ಪತ್ನಿ ಬರೆದಿರುವ ಈ ಅಭಿಪ್ರಾಯ ಹೀಗಿದೆ……
ನಮ್ಮ ಬಾಳಿಲದ ಪಕ್ಕದ ಐವರ್ನಾಡಿನಲ್ಲಿ ಒಂದು ಪುಟ್ಟ ಕುಟುಂಬ.ಅಪ್ಪ,ಅಮ್ಮ,ಮಗಳು. ಮಗಳು ಪೋಲಿಯೋ ಪೀಡಿತೆ .ಕಾರಣಾಂತರಗಳಿಂದ ಆ ಕುಟುಂಬ ಪುತ್ತೂರಿನ ಪುರುಷರಕಟ್ಟೆಗೆ ಹೋಗಿ ನೆಲೆಸುತ್ತದೆ.
ಹಿಂದಿನಿಂದಲೂ ಬಾಳಿಲದ ಡಾಕ್ಟರ್ ಬಳಿಗೆ ಔಷಧಕ್ಕೆ ಬರುತ್ತಿದ್ದವರು ಊರು ಬದಲಾದರೂ ವೈದ್ಯರನ್ನು ಬದಲಿಸಿಲ್ಲ. ಈ ಮಧ್ಯೆ ಅಮ್ಮ ಕಿಡ್ನಿ ಸಮಸ್ಯೆಯಿಂದ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುತ್ತಾರೆ.ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಡುತ್ತಾರೆ.
ಬಾಳಿಲದ ವೈದ್ಯರು ವಿಧಿವಶರಾದಾಗ ಕ್ಲಿನಿಕ್ ಗೆ ಬೇರೆ ವೈದ್ಯರು ಬರುತ್ತಾರಾ ಅಂತ ವಿಚಾರಿಸಿಕೊಳ್ತಾರೆ. ನಿರಾಶರಾಗ್ತಾರೆ. ಆಗ ಅವರು ಹೇಳುತ್ತಾರೆ, ನಾವು ಸ್ವಲ್ಪ ದುಡ್ಡು ಕೊಡಲು ಇದೆ ಡಾಕ್ಟರ್ ಗೆ, ಕೊಡ್ತೇವೆ ಅಂತ ಹೇಳಿದ್ದರು.
ಆ 6 ತಿಂಗಳ ಬಳಿಕ ಮೊನ್ನೆ ಕರೆ ಮಾಡಿ ತಿಳಿಸಿದರು. ನಾಳೆ ಬಂದು ದುಡ್ಡು ಕೊಡ್ತೇವೆ ಅಂತ. ತೊಂದರೆ ಇಲ್ಲಮ್ಮ , ನೀವು ಕೊಡ್ಬೇಕಾಗಿಲ್ಲ ಅಂತ ಹೇಳಿದ್ದಕ್ಕೆ. ಇಲ್ಲ, ಕೊಡುತ್ತೇವೆ ತಕೊಳ್ಬೇಕು ಅಂತ ಉತ್ತರ ನೀಡಿದ್ದರು.
ಮರುದಿನ ಆ ಹುಡುಗಿಯ ತಂದೆ ಬಂದು, ಪಶ್ಚಾತ್ತಾಪದಿಂದ “ಆಜಿ ತಿಂಗಳಾಂಡ್ ಎಂದು ಹೇಳುತ್ತಾ 300 ರೂಪಾಯಿ ಕೊಟ್ಟಾಗ, ಒಂದು ಮಾತೂ ಬಾರದ ಸ್ಥಿತಿಯಲ್ಲಿ ಧಾರಾಕಾರ ಕಣ್ಣೀರು ಸುರಿಸಬೇಕಾಯಿತು.
ನಿಜವಾಗಿಯೂ ಡಾಕ್ಟರ್ ಗೆ ಸಲ್ಲ ಬೇಕಾದ ಹಣ ಎಷ್ಟಿದೆಯೋ. ಸಲ್ಲಿಸಬೇಕಾದವರು ಎಷ್ಟು ಜನರಿದ್ದಾರೋ ತಿಳಿಯದು….? ಆದರೆ ತಾವಾಗಿ ಹೇಳಿ ತಂದು ಕೊಟ್ಟ ಆ 300 ರೂಪಾಯಿ ಮೌಲ್ಯಕ್ಕಿಂತಲೂ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು.
ಇಂತಹ ಪ್ರಾಮಾಣಿಕತೆಗೆ ಮನಸಾರೆ ವಂದಿಸುತ್ತಾ ಪ್ರಾರ್ಥಿಸುತ್ತಿದ್ದೇನೆ, ಈ ಕುಟುಂಬ ನೆಮ್ಮದಿಯ ಸುಖ ಸಂತೋಷದ ಬದುಕು ಕಂಡು ಕೊಳ್ಳುವಂತಾಗಲಿ.
# ಚಿಕಿತ್ಸಾ ಬಾಳಿಲ
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…