Advertisement
The Rural Mirror ಕಾಳಜಿ

ಆ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು….!

Share

ಇದೊಂದು ಅಭಿಪ್ರಾಯವನ್ನು ರೂರಲ್‌ ಮಿರರ್‌ ಪ್ರಕಟಿಸಲು ಆಸಕ್ತಿ ವಹಿಸಿದೆ. ಶ್ರದ್ಧೆ ಹಾಗೂ ಆ ಪ್ರಾಮಾಣಿಕತೆ ಇಡೀ ಸಮುದಾಯಕ್ಕೆ ಮಾದರಿಯಾಗಿದೆ ಕೂಡಾ.  ಬಾಳಿಲದ ವೈದ್ಯರ ಪತ್ನಿ ಬರೆದಿರುವ ಈ ಅಭಿಪ್ರಾಯ ಹೀಗಿದೆ……

Advertisement

ನಮ್ಮ ಬಾಳಿಲದ ಪಕ್ಕದ ಐವರ್ನಾಡಿನಲ್ಲಿ ಒಂದು ಪುಟ್ಟ ಕುಟುಂಬ.ಅಪ್ಪ,ಅಮ್ಮ,ಮಗಳು.  ಮಗಳು ಪೋಲಿಯೋ ಪೀಡಿತೆ  .ಕಾರಣಾಂತರಗಳಿಂದ ಆ ಕುಟುಂಬ ಪುತ್ತೂರಿನ ಪುರುಷರಕಟ್ಟೆಗೆ ಹೋಗಿ ನೆಲೆಸುತ್ತದೆ.

ಹಿಂದಿನಿಂದಲೂ ಬಾಳಿಲದ ಡಾಕ್ಟರ್ ಬಳಿಗೆ ಔಷಧಕ್ಕೆ ಬರುತ್ತಿದ್ದವರು ಊರು ಬದಲಾದರೂ ವೈದ್ಯರನ್ನು ಬದಲಿಸಿಲ್ಲ. ಈ ಮಧ್ಯೆ ಅಮ್ಮ ಕಿಡ್ನಿ ಸಮಸ್ಯೆಯಿಂದ ವಾರಕ್ಕೆರಡು ಬಾರಿ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುತ್ತಾರೆ.ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಡುತ್ತಾರೆ. 

ಬಾಳಿಲದ ವೈದ್ಯರು ವಿಧಿವಶರಾದಾಗ ಕ್ಲಿನಿಕ್ ಗೆ ಬೇರೆ ವೈದ್ಯರು ಬರುತ್ತಾರಾ ಅಂತ ವಿಚಾರಿಸಿಕೊಳ್ತಾರೆ. ನಿರಾಶರಾಗ್ತಾರೆ. ಆಗ ಅವರು ಹೇಳುತ್ತಾರೆ, ನಾವು ಸ್ವಲ್ಪ ದುಡ್ಡು ಕೊಡಲು ಇದೆ ಡಾಕ್ಟರ್ ಗೆ, ಕೊಡ್ತೇವೆ ಅಂತ ಹೇಳಿದ್ದರು.

ಆ 6 ತಿಂಗಳ ಬಳಿಕ ಮೊನ್ನೆ ಕರೆ ಮಾಡಿ ತಿಳಿಸಿದರು. ನಾಳೆ ಬಂದು ದುಡ್ಡು ಕೊಡ್ತೇವೆ ಅಂತ. ತೊಂದರೆ ಇಲ್ಲಮ್ಮ , ನೀವು ಕೊಡ್ಬೇಕಾಗಿಲ್ಲ ಅಂತ ಹೇಳಿದ್ದಕ್ಕೆ. ಇಲ್ಲ, ಕೊಡುತ್ತೇವೆ ತಕೊಳ್ಬೇಕು ಅಂತ ಉತ್ತರ ನೀಡಿದ್ದರು.

ಮರುದಿನ ಆ ಹುಡುಗಿಯ ತಂದೆ ಬಂದು,  ಪಶ್ಚಾತ್ತಾಪದಿಂದ “ಆಜಿ ತಿಂಗಳಾಂಡ್ ಎಂದು ಹೇಳುತ್ತಾ 300 ರೂಪಾಯಿ ಕೊಟ್ಟಾಗ,  ಒಂದು ಮಾತೂ ಬಾರದ ಸ್ಥಿತಿಯಲ್ಲಿ ಧಾರಾಕಾರ ಕಣ್ಣೀರು ಸುರಿಸಬೇಕಾಯಿತು.

ನಿಜವಾಗಿಯೂ ಡಾಕ್ಟರ್ ಗೆ ಸಲ್ಲ ಬೇಕಾದ ಹಣ ಎಷ್ಟಿದೆಯೋ. ಸಲ್ಲಿಸಬೇಕಾದವರು ಎಷ್ಟು ಜನರಿದ್ದಾರೋ ತಿಳಿಯದು….? ಆದರೆ ತಾವಾಗಿ ಹೇಳಿ ತಂದು ಕೊಟ್ಟ ಆ 300  ರೂಪಾಯಿ ಮೌಲ್ಯಕ್ಕಿಂತಲೂ ಪ್ರಾಮಾಣಿಕತೆಗೆ ಬೆಲೆ ಕಟ್ಟಲಾಗದು. 

ಇಂತಹ ಪ್ರಾಮಾಣಿಕತೆಗೆ  ಮನಸಾರೆ ವಂದಿಸುತ್ತಾ ಪ್ರಾರ್ಥಿಸುತ್ತಿದ್ದೇನೆ, ಈ ಕುಟುಂಬ ನೆಮ್ಮದಿಯ ಸುಖ ಸಂತೋಷದ ಬದುಕು ಕಂಡು ಕೊಳ್ಳುವಂತಾಗಲಿ.

# ಚಿಕಿತ್ಸಾ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

12 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

20 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

20 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

20 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

20 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago